ರೇಣುಕಾಚಾರ್ಯ 
ರಾಜಕೀಯ

ವಿಜಯೇಂದ್ರ ಯುವಕರ ಕಣ್ಮಣಿ, ಅವರನ್ನು ಕೆಳಗಿಳಿಸಿದರೆ ಬಿಜೆಪಿಗೆ 10 ಸ್ಥಾನಗಳು ಸಿಗುವುದಿಲ್ಲ: ರೇಣುಕಾಚಾರ್ಯ

ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ

ಬೆಂಗಳೂರು: ಕಳೆದ ಬಾರಿ ನಮ್ಮ ಒಳಜಗಳದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಜಯೇಂದ್ರರನ್ನು ಕೆಳಗಿಳಿಸಿದರೆ ರಾಜ್ಯದಲ್ಲಿ ಬಿಜೆಪಿಗೆ 10 ಸ್ಥಾನ ಬರೋದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ರೇಣುಕಾಚಾರ್ಯ ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ, ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ. ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ.

ಪಕ್ಷದಲ್ಲಿನ ಬೆಳವಣಿಗೆ ನೋಡಿ ಜನ ಬೈಯುತ್ತಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆ ಕಂಡು ಕಾರ್ಯಕರ್ತರಿಗೆ ನೋವಾಗಿದೆ. ನಾವು ಸೈಲೆಂಟ್ ಇದ್ವಿ, ಯಡಿಯೂರಪ್ಪ, ವಿಜಯೇಂದ್ರ ಮಾತಾಡಬೇಡಿ ಅಂದಿದ್ರು. ಆದ್ರೆ ನಮಗೆ ನೋವಾಗಿದೆ. ಹೀಗಾಗಿ ಇಂದು ತುರ್ತು ಸಭೆ ನಡೆಸಿ ಸುದ್ದಿಗೋಷ್ಠಿ ನಡೆಸಬೇಕಾಯಿತು.

ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು. ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ. ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ. ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ. ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT