ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

BJPಯವರೇ.. ನಿಮಗೆ ಮಾನ ಮಾರ್ಯಾದೆ-ನೈತಿಕತೆಗೆ ಅರ್ಥ ಗೊತ್ತಿದೆಯೇ? ಕೈ ತೋರಿಸಿ ಯಾಕೆ ಅವಲಕ್ಷಣ ಮಾಡಿಸಿಕೊಳ್ಳುತ್ತೀರೋ‌ ಗೊತ್ತಿಲ್ಲ: ಕಾಂಗ್ರೆಸ್

ನಮ್ಮ ಸರ್ಕಾರದ ಕೊನೆಯಲ್ಲಿ ಅಂದರೆ ಮೇ 2018 ರ ಅಂತ್ಯಕ್ಕೆ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ಬಾಕಿ ಇದ್ದದ್ದು ರೂ14.71 ಕೋಟಿ ಅದೇ 2023 ರ ಮೇ ಅಂತ್ಯಕ್ಕೆ ತಮ್ಮ ಸರ್ಕಾರ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ರೂ 1380.59 ಕೋಟಿ.

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಸಾಲ ಪಡೆಯುತ್ತಿರುವ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಅವರೇ ನಿಜವಾಗಲೂ ತಮಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ನೈತಿಕತೆಗೆ ಅರ್ಥ ಗೊತ್ತಿದೆಯೇ? ನಾವು ಈಗಾಗಲೇ ಹತ್ತು ಹಲವು ಬಾರಿ ಹೇಳಿದ್ದೇವೆ. ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಲೇಬೇಕು ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸುವ ಅನಿವಾರ್ಯತೆ ಇದೆ. ಈ ಲೋನ್ ತೆಗೆದುಕೊಳ್ಳುತ್ತಿರುವುದು ತಮ್ಮ ಕಾಲದಲ್ಲಿನ ಬಾಕಿ ಉಳಿಸಿ ಹೋಗಿದ್ದ ನೌಕರರ ಭವಿಷ್ಯ ನಿಧಿ ಮೊತ್ತ ಮತ್ತು ಡೀಸೆಲ್ ಬಾಕಿ ಮೊತ್ತ ಪಾವತಿಸಲು ಎಂಬುದನ್ನು ತಮಗೆ ಪ್ರತಿ ಬಾರಿ ಹೇಳಲು ಅಸಹ್ಯವಾಗುತ್ತಿದೆ ಎಂದು ಕಿಡಿಕಾರಿದೆ.

ನಮ್ಮ ಸರ್ಕಾರದ ಕೊನೆಯಲ್ಲಿ ಅಂದರೆ ಮೇ 2018 ರ ಅಂತ್ಯಕ್ಕೆ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ಬಾಕಿ ಇದ್ದದ್ದು ರೂ14.71 ಕೋಟಿ ಅದೇ 2023 ರ ಮೇ ಅಂತ್ಯಕ್ಕೆ ತಮ್ಮ ಸರ್ಕಾರ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ರೂ 1380.59 ಕೋಟಿ. ನಾವು ನಿಮ್ಮಗಳ ರೀತಿ ಸಾರಿಗೆ ಸಂಸ್ಥೆಗಳನ್ನು ಸಂಕಷ್ಟದ ಸುಳಿಯಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರವೇ ನಾಲ್ಕು ನಿಗಮಗಳಿಗೆ ರೂ. 2000 ಕೋಟಿ ಲೋನ್ ತೆಗೆದುಕೊಳ್ಳಲು ಅನುಮತಿ‌ ನೀಡಿದೆ.

ನಾವು ಏನೆಲ್ಲಾ ಹೇಳಬಹುದೋ ಎಲ್ಲವನ್ನೂ ಹೇಳಿ ಆಯಿತು‌‌. ಸಾಮಾನ್ಯ ಜ್ಞಾನ, ಸಾಮಾನ್ಯ ಗಣಿತ ಬಾರದ ಅಜ್ಞಾನಿಗಳು ಎಂದೂ ಸಹ ಹೇಳಿದ ಮೇಲೂ ಸರಿಯಾದ‌ ಮಾಹಿತಿ ಕಲೆಹಾಕಿಯಾದರೂ ಮಾತನಾಡಬಾರದೇ? ಕೈ ತೋರಿಸಿ ಯಾಕೆ ಅವಲಕ್ಷಣ ಮಾಡಿಸಿಕೊಳ್ಳುತ್ತಾರೋ‌ ಗೊತ್ತಿಲ್ಲ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ರೂ 2 ಲಕ್ಷ ಕೋಟಿ ಸಾಲ ಮಾಡಿದ್ದು, ದೇಶದ‌ 67 ವರ್ಷಗಳ ಇತಿಹಾಸದಲ್ಲಿ ಆಗಿರದಷ್ಟು ಸಾಲ ಇಂದಿನ ಕೇಂದ್ರ ಸರ್ಕಾರ 2014-2025 ರ ಅವಧಿಗೆ ರೂ 149 ಲಕ್ಷ ಕೋಟಿಗಳ ಸಾಲ, ಇದಾವುದರ ಬಗ್ಗೆ ಚಕಾರವೆತ್ತಲು ಸಾಹಸ ಮಾಡದ ಇವರು ಸುಳ್ಳು ಅಂಕಿ ಅಂಶಗಳನ್ನು ನೀಡುತ್ತಾ ಜನರನ್ನು ದಾರಿ ತಪ್ಪಿಸುತ್ತಾ, ಟ್ಟೀಟ್ ಮಾಡುವುದೇ ದೊಡ್ಡ ಸಾಧನೆ ಎಂದು ತಿಳಿದಿರುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ನಡೆಸಿದೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಬಿಜೆಪಿ, ಸಾರಿಗೆ ನಿಗಮಗಳು ಭರ್ಜರಿ ಲಾಭದಲ್ಲಿವೆ ಎಂದು ಪುಂಗಿ ಊದಿದ ಸಚಿವ ರಾಮಲಿಂಗಾ ರೆಡ್ಡಿಯವರೇ, ಇದೇನು ಸಾಲದ ಸುಳಿಯಲ್ಲಿ ಸಾರಿಗೆ ನಿಗಮಗಳನ್ನು ಸಿಲುಕಿಸುತ್ತಿದ್ದೀರಿ. ಕೆಎಸ್‌ಆರ್‌ಟಿಸಿ ನಂತರ ಇದೀಗ ಬಿಎಂಟಿಸಿ ಬರೋಬ್ಬರಿ 589.20 ಕೋಟಿ ರೂ. ಸಾಲಕ್ಕಾಗಿ ಭಿಕ್ಷೆ ಬೇಡುತ್ತಿದೆ. ರಾಜ್ಯದ ನಾಲ್ಕು ನಿಗಮಗಳು ಒಟ್ಟು 2,000 ಕೋಟಿ ರೂ. ಸಾಲ ಪಡೆಯಲಿವೆ. ಕನ್ನಡಿಗರ ತೆರಿಗೆ ಹಣವನ್ನು ಲೂಟಿ ಮಾಡಿ ಖಜಾನೆ ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಸಾರಿಗೆ ನಿಗಮಗಳ ಮೂಲಕ ಸಾಲದ ರೂಪದಲ್ಲಿ ಲೂಟಿ ಹೊಡೆಯಲು ಮುಂದಾಗಿದೆ ಎಂದು ಕಿಡಿಕಾರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ