ಮಾಜಿ ಸಚಿವ ಶ್ರೀರಾಮುಲು 
ರಾಜಕೀಯ

BJP ಬಣ ಬಡಿದಾಟ: ಒಡೆದ ಮನಸ್ಸುಗಳ ಒಗ್ಗೂಡಿಸಲು ಶೀಘ್ರದಲ್ಲೇ ಶ್ರೀರಾಮುಲು ರಾಜ್ಯ ಪ್ರವಾಸ

ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್‌ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ನಾಯಕರ ಒಗ್ಗೂಡಿಸಲು ರಾಜ್ಯ ಪ್ರವಾಸ ಮಾಡುವುದಾಗಿ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ಭಾನುವಾರ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಶ್ರೀರಾಮುಲು ಅವರು, ರಾಜ್ಯದಲ್ಲಿ ಬಿಜೆಪಿಯ ಎಲ್ಲಾ ನಾಯಕರೂ ಒಂದೇ ವೇದಿಕೆಯಲ್ಲಿ ಬರಬೇಕು. ಹೈಕಮಾಂಡ್‌ ಎಲ್ಲರನ್ನೂ ಒಟ್ಟಿಗೆ ತರಬೇಕು. ಬಿಜೆಪಿಯ ಎಲ್ಲಾ ಒಡೆದ ಮನಸ್ಸುಗಳನ್ನು ಒಟ್ಟುಗೂಡಿಸುವ ಸದುದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆಂದು ಹೇಳಿದರು.

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಹಾಗೂ ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸಲು ರಾಜ್ಯದಾದ್ಯಂತ ಯಾತ್ರೆ ಹಮ್ಮಿಕೊಳ್ಳಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯಾತ್ರೆ ಮಾಡುವ ಉದ್ದೇಶವಿದ್ದು, ಈ ಕುರಿತು ಪಕ್ಷದ ಹಿರಿಯ ನಾಯಕರು ಮತ್ತು ಹೈಕಮಾಂಡ್‌ ಜೊತೆ ಚರ್ಚೆ ನಡೆಸಿದ್ದೇನೆಂದು ತಿಳಿಸಿದರು.

ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳುವ ವಿಚಾರದಲ್ಲಿ ಯಾವುದೇ ವೈಯಕ್ತಿಕ ಸ್ವಾರ್ಥ ಇಲ್ಲ. ಬಿಜೆಪಿ ನಾಯಕರು ಹಾಗೂ ಸಂಘ ಪರಿವಾರದ ಎಲ್ಲರೂ ಒಗ್ಗೂಡಬೇಕು ಎಂಬುದಷ್ಟೇ ನನ್ನ ಆಶಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT