ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್  
ರಾಜಕೀಯ

BJP ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದು: ದೆಹಲಿ ತೆರಳಿದ ವಿಜಯೇಂದ್ರ, ಶೀಘ್ರದಲ್ಲೇ ಅಮಿತ್ ಶಾ ಭೇಟಿ..!

ಭಾನುವಾರವೇ ವಿಜಯೇಂದ್ರ ಅವರು ದೆಹಲಿಗೆ ತೆರಳಿದ್ದು, ಒಂದೆರಡು ದಿನಗಳ ಕಾಲ ಅಲ್ಲಿಯೇ ಇದ್ದು ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟಕ್ಕೆ ಬ್ರೇಕ್‌ ಹಾಕಲು ಹೈಕಮಾಂಡ್‌ ಮುಂದಾಗಿದೆ, ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಗೆ ಭೇಟ ನೀಡಿದ್ದು, ಶೀಘ್ರದಲ್ಲೇ ಅಮಿತ್ ಶಾ ಅವರು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ಭಾನುವಾರವೇ ವಿಜಯೇಂದ್ರ ಅವರು ದೆಹಲಿಗೆ ತೆರಳಿದ್ದು, ಒಂದೆರಡು ದಿನಗಳ ಕಾಲ ಅಲ್ಲಿಯೇ ಇದ್ದು ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರ ಮತ್ತು ಮಣಿಪುರದಲ್ಲಿ ಸಿಎಂ ಎನ್. ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯನಿರತರಾಗಿದ್ದು, ಬಿಡುವಾದ ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿ, ನಂತರವೇ ವಾಪಸ್ಸಾಗಲಿದ್ದಾರೆಂದು ವರದಿಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವಾಗಿ ವರಿಷ್ಠರು ನಿರ್ಧಾರ ಕೈಗೊಳ್ಳಲು ಮುಂದಾಗಿರುವ ಹಿನ್ನೆಲೆಯಲ್ಲಿ ಶಾ ಅವರೊಂದಿಗಿನ ವಿಜಯೇಂದ್ರ ಭೇಟಿ ನಿರ್ಣಾಯಕವಾಗಿದೆ.

ಏತನ್ಮಧ್ಯೆ ಸೋಮಣ್ಣ ಮನೆ ಪೂಜೆ ನೆಪದಲ್ಲಿ ಬಂಡಾಯ ನಾಯಕರೂ ಕೂಡ ದೆಹಲಿ ಸೇರಿದ್ದಾರೆ. ಸೋಮಣ್ಣ ಮನೆ ಪೂಜೆಗೆ ಹೋಗುತ್ತಿದ್ದೇವೆ ಎಂದು ಎರಡೂ ಬಣದ ನಾಯಕರು ಹೇಳಿದ್ದು, ಅತ್ತ ‘ನಾನು ಯಾರನ್ನೂ ಕರೆದಿಲ್ಲ’ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಕ್ಷದ ಹೈಕಮಾಂಡ್ ನಾಯಕರು ತಮಗೆ ಅವಕಾಶ ನೀಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರುವ ಮಾಜಿ ಸಚಿವ ಬಿ. ಶ್ರೀರಾಮುಲು ಅವರು, ಪ್ರಯಾಗ್‌ರಾಜ್‌ನಲ್ಲಿ ಪವಿತ್ರ ಸ್ನಾನ ಮಾಡಿ ತವರಿಗೆ ವಾಪಸ್ಸಾಗಿದ್ದಾರೆ.

ಸಂಡೂರು ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ನೇತೃತ್ವದ ಸಮಿತಿಯ ವರದಿಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಚುನಾವಣೆಗೆ ಉಳಿದಿರುವ ಕೊನೆಯ ಐದು ದಿನಗಳಲ್ಲಿ ಶ್ರೀರಾಮುಲು ಪ್ರಚಾರಕ್ಕೆ ಗೈರುಹಾಜರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ವಿಷಯದ ಬಗ್ಗೆ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶ್ರೀರಾಮುಲು ಅವರನ್ನು ಪ್ರಶ್ನಿಸಿದ್ದರು, ಇದರಿಂದ ಅಸಮಾಧಾನಗೊಂಡಿದ್ದ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT