ಕಂಪ್ಲಿ ಶಾಸಕ ಗಣೇಶ್ 
ರಾಜಕೀಯ

ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೇ ಅನಿವಾರ್ಯ: ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ಒಳ್ಳೆಯದಲ್ವೇ? ನಾನೊಬ್ಬನೇ ಅಲ್ಲ 138 ಶಾಸಕರ ಬೆಂಬಲ ಅವರಿಗಿದೆ ಎಂದು ಕಂಪ್ಲಿ ಗಣೇಶ್ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ನಾವೆಲ್ಲ ಶಾಸಕರು ಅವರ ಬೆಂಬಲಕ್ಕಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಕಂಪ್ಲಿ ಗಣೇಶ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂಪ್ಲಿ ಗಣೇಶ್, ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ. ಇದಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯೇ ಸಾಕ್ಷಿಯಾಗಿದೆ. ಅವರು ಒಂದು ರೀತಿ ರೋಲ್ ಮಾಡೆಲ್ ಇದ್ದಂತೆ ಎಂದರು.

ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು ಎಂಬ ವಿಚಾರವಾಗಿ ಮಾತನಾಡಿದ ಗಣೇಶ್, ಹೈಕಮಾಂಡ್ ಹೇಳಿದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದ್ರೆ ಒಳ್ಳೆಯದಲ್ವೇ? ನಾನೊಬ್ಬನೇ ಅಲ್ಲ 138 ಶಾಸಕರ ಬೆಂಬಲ ಅವರಿಗಿದೆ ಎಂದು ಗಣೇಶ್ ಬ್ಯಾಟಿಂಗ್ ಮಾಡಿದರು.

ಇನ್ನು ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಅದನ್ನು ಪಾರ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ರವಿಕುಮಾರ್ ಗಣಿಗ; ರೈತರಿಂದ ಪ್ರತಿಭಟನೆ, ಹೆದ್ದಾರಿ ತಡೆದು ಆಕ್ರೋಶ

ಕರ್ನಾಟಕದ ರೈಲು ನಿಲ್ದಾಣಗಳಲ್ಲಿರುವ ಮಳಿಗೆಗಳ ಮೇಲೆ ಆಹಾರ ಇಲಾಖೆ ದಿಢೀರ್ ದಾಳಿ: ಅವಧಿ ಮೀರಿದ ಉತ್ಪನ್ನಗಳು, ಬಣ್ಣಗಳು ಪತ್ತೆ!

NEET ಪ್ರತಿಭಟನೆ: ಪೊಲೀಸ್ ದೌರ್ಜನ್ಯ, ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂಕೋರ್ಟ್!

BNP ನಾಯಕ ಫಕ್ರುಲ್ ಇಸ್ಲಾಮ್ ಆಲಂಗೀರ್ ಬಾಂಗ್ಲಾದ ನೂತನ ಅಧ್ಯಕ್ಷ

ಕನ್ವರ್ ಯಾತ್ರೆಯ ವೇಳೆ ಮಹಿಳೆಯರು ಟ್ರಕ್ ಮೇಲೆ ನೃತ್ಯ ಮಾಡಿದ್ದು; ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ, Video!