ಸತೀಶ್ ಜಾರಕಿಹೊಳಿ 
ರಾಜಕೀಯ

ಸಿದ್ದರಾಮಯ್ಯ ನಮಗೆ ಬೇಕೇ ಬೇಕು; ಮುಂದಿನ ಚುನಾವಣೆ ಗೆಲ್ಲಲು ಅವರು ಅನಿವಾರ್ಯ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ನಮಗೆ ಬೇಕೆ ಬೇಕು. ಚುನಾವಣೆ ನಿವೃತ್ತಿ ಆದ್ರೂ ಕೂಡ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಅವರು ಇರಬೇಕು. ಹೊಸ ನಾಯಕತ್ವ ತಯಾರಾಗುವರೆಗೆ ಸಿದ್ದರಾಮಯ್ಯ ಅನಿವಾರ್ಯ.

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಹೊಸ ನಾಯಕತ್ವ ಸಿದ್ದಗೊಳ್ಳುವವರೆಗೆ ಸಿದ್ದರಾಮಯ್ಯ ಅನಿವಾರ್ಯ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿರುವ ಅವರು, ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ. ಈ ಮೂಲಕ ಅಧಿಕಾರ ಹಸ್ತಾಂತರದ ವಿರುದ್ಧವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ನಮಗೆ ಬೇಕೆ ಬೇಕು. ಚುನಾವಣೆ ನಿವೃತ್ತಿ ಆದ್ರೂ ಕೂಡ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಅವರು ಇರಬೇಕು. ಸಿದ್ದರಾಮಯ್ಯ ಇರಬೇಕು ಎಂಬ ಆಸೆ ಇದೆ, ಹೊಸ ನಾಯಕತ್ವ ತಯಾರಾಗುವರೆಗೆ ಸಿದ್ದರಾಮಯ್ಯ ಅನಿವಾರ್ಯ ಎಂದು ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಆಶಯ ಕೂಡ ಅದೆ ಇದೆ. ಚುನಾವಣೆ ನಿವೃತ್ತಿ ಆದ್ರೂ ಸಕ್ರಿಯ ರಾಜಕೀಯದಲ್ಲಿ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು. ಚುನಾವಣೆ ಗೆಲ್ಲಲು ಅನಕೂಲ ಆಗುತ್ತೆ. ಇನ್ನೊಂದು ಅವಧಿಯವರೆಗೆ ರಾಜಕೀಯ ಅವರು ಇರಬೇಕು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ತೀರ್ಮಾನ ‌ಮಾಡ್ತಾರೆ. ಕರ್ನಾಟಕ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಬೇರೆ ರಾಜ್ಯಗಳ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ಚರ್ಚೆ ಬಂದಾಗ ಅಭಿಪ್ರಾಯ ಹೇಳುತ್ತೇವೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ ವಿಚಾರವಾಗಿ ಇದೇ ವೇಳೆ ಮಾತನಾಡಿದ ಅವರು, ಉಸ್ತುವಾರಿಗಳ ಬದಲಾವಣೆ ಬಗ್ಗೆ ಗೊತ್ತಿಲ್ಲ. ನಮ್ಮ ವ್ಯಾಪ್ತಿಯಲ್ಲಿ ಅದು ಇಲ್ಲ. ಇದನ್ನು ರಾಹುಲ್ ಗಾಂಧಿ ನಿರ್ಧಾರ ‌ಮಾಡ್ತಾರೆ. ಬೇರೆ ರಾಜ್ಯಗಳ ಉಸ್ತುವಾರಿ ಬದಲಾವಣೆ ಆಗಿದೆ. ಸುರ್ಜೇವಾಲ ಈಗ ಇದ್ದಾರೆ, ಅದರ ಬಗ್ಗೆ ಏನು ಹೇಳಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT