ಬಸವರಾಜ ಬೊಮ್ಮಾಯಿ 
ರಾಜಕೀಯ

ನಮ್ಮ ಮೆಟ್ರೋ ದರ ಏರಿಕೆಗೆ ಶಿಫಾರಸು ಮಾಡಿದ್ದು ರಾಜ್ಯ ಸರ್ಕಾರ: ಸಂಸದ ಬೊಮ್ಮಾಯಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ.

ಹುಬ್ಬಳ್ಳಿ: ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ಜನರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ನಡುವೆ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಹಗ್ಗಜಗ್ಗಾಟ ಶುರುವಾಗಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು, ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿದರು.

ಮೆಟ್ರೋ ದರ ವಿಚಾರದಲ್ಲಿ ಎಲ್ಲಾ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನ ಉದಯಗಿರಿ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದುಕೊಂಡಿತೋ ಆಗ ಸರ್ಕಾರ ಯಾರ ಪರ ಇದೆ ಎನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದೂ ಗೊತ್ತಾಗುತ್ತದೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT