ದಿನೇಶ್ ಗುಂಡೂರಾವ್ 
ರಾಜಕೀಯ

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಮುಖ್ಯಮಂತ್ರಿ ಕುರಿತ ಚರ್ಚೆ ಅನಗತ್ಯ: ದಿನೇಶ್ ಗುಂಡೂರಾವ್

ಒಬ್ಬ ಸಿಎಂ ಇದ್ದಾಗ ಇದನ್ಯಾಕೆ ಚರ್ಚೆ ಮಾಡಬೇಕೆಂದು ಪ್ರಶ್ನಿಸಿದರು. ಅಲ್ಲದೆ, ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆಗಳಿಲ್ಲ, ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಏನಾಗುತ್ತದೆ ನೋಡೋಣ.

ಬಾಗಲಕೋಟೆ: ರಾಜ್ಯದಲ್ಲಿ ಒಬ್ಬರು ಸಿಎಂ ಇರುವಾಗ ಇನ್ನೊಬ್ಬ ಮುಖ್ಯಮಂತ್ರಿ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇವೆಲ್ಲ ಗುಸುಗುಸು ಸುದ್ದಿಗಳು ಇದ್ದೇ ಇರುತ್ತವೆ. ಇನ್ನೊಬ್ಬ ಸಿಎಂ ಬೇಕು, ಇರೋ ಸಿಎಂ 5 ವರ್ಷ ಇರುತ್ತಾರೆ ಎನ್ನುವ ವಿಷಯ ಬೇಕಾಗಿಲ್ಲ. ಮುಂದುವರೆಯೋದು, ಬದಲಾವಣೆ ಆಗೋದು ಎನ್ನುವ ಮಾತು ಕೂಡ ಅವಶ್ಯಕತೆ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಸಿಎಂ ಇದ್ದಾಗ ಇದನ್ಯಾಕೆ ಚರ್ಚೆ ಮಾಡಬೇಕೆಂದು ಪ್ರಶ್ನಿಸಿದರು. ಅಲ್ಲದೆ, ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆಗಳಿಲ್ಲ, ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಏನಾಗುತ್ತದೆ ನೋಡೋಣ ಎಂದು ಹೇಳಿದರು.

ಬಳಿಕ ಗ್ಯಾರಂಟಿ ಯೋಜನೆಗಳಿಗೆ ನಿಧಿ ವಿತರಣೆಯಲ್ಲಿನ ವಿಳಂಬದ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ ಸಚಿವರು, ಮಾರ್ಚ್ ವೇಳೆಗೆ ಎಲ್ಲಾ ಬಾಕಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ನಮ್ಮ ಸರ್ಕಾರ ತನ್ನ ಭರವಸೆಗಳನ್ನು ಉಳಿಸಿಕೊಳ್ಳುತ್ತದೆ. ಸರ್ಕಾರಿ ಯೋಜನೆಗಳಲ್ಲಿ, ಹೆಚ್ಚಾಗಿ ಎರಡರಿಂದ ನಾಲ್ಕು ತಿಂಗಳ ಮಧ್ಯಂತರದಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ವಿಳಂಬ ಸರಿ ಎಂದು ನಾನು ಹೇಳುತ್ತಿಲ್ಲ. ಆದರೂ ಹಣವನ್ನು ಶೀಘ್ರದಲ್ಲೇ ವಿತರಿಸಲಾಗುವುದು" ಎಂದು ಹೇಳಿದರು.

ಸರ್ಕಾರವು ಕೆಲವು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಯೋಜಿಸುತ್ತಿದೆ ಎಂಬ ವರದಿಗಳ ಕುರಿತು ಮಾತನಾಡಿ, ರಾಜಕೀಯ ಲಾಭ ಅಥವಾ ವೈಯಕ್ತಿಕ ಪ್ರತಿಷ್ಠೆಗಿಂತ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ವಿಧಾನದೊಂದಿಗೆ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಬೇಕಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಹಣಕಾಸಿನ ಅಗತ್ಯವನ್ನೂ ಸಚಿವರು ಒತ್ತಿ ಹೇಳಿದರು.

ಗುಣಮಟ್ಟದ ಶಿಕ್ಷಣವು ಆದ್ಯತೆಯಾಗಿರಬೇಕು. ವಿದ್ಯಾರ್ಥಿಗಳು ಈ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವ ಬಗ್ಗೆ ಹೆಮ್ಮೆ ಪಡಬೇಕು ಮತ್ತು ವಿಶ್ವವಿದ್ಯಾಲಯಗಳು ಶೈಕ್ಷಣಿಕ ಶ್ರೇಷ್ಠತೆಯ ಮೂಲಕ ಮಾನ್ಯತೆಯನ್ನು ಗಳಿಸಬೇಕು. ಸಂಪುಟ ಉಪಸಮಿತಿ ಈ ಅಂಶಗಳನ್ನು ತೀವ್ರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT