ಸಂಸದ ಪ್ರತಾಪ್ ಸಿಂಹ 
ರಾಜಕೀಯ

ಉದಯಗಿರಿ ಗಲಭೆ ಪ್ರಕರಣ: ಆರೋಪಿಗಳಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ- ಪ್ರತಾಪ್ ಸಿಂಹ

ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ.

ಮೈಸೂರು: ಉದಯಗಿರಿ ಘಟನೆಯಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಬುಧವಾರ ಆರೋಪಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್‌ ಅಜೆಂಡಾವಾಗಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬೇಕಾಗಿಲ್ಲ. ಅವರಿಗೆ ಮುಸಲ್ಮಾನರ ಮತ ಬೇಕು ಅಷ್ಟೇ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ನಿಷ್ಠಾವಂತ ಪೊಲೀಸ್‌ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅಲ್ಲದೇ, ರಾಜ್ಯ ಸರ್ಕಾರವನ್ನು ತಾಲಿಬಾನಿ ಸರ್ಕಾರಕ್ಕೆ ಹೋಲಿಸಿ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಸ್ಥರಾಗಿದ್ದಾರೆಂದು ಆರೋಪ ಮಾಡಿದರು.

ಮುಸ್ಲಿಂರು ಬರೀ ಕೌರ್ಯ ಮಾಡುತ್ತಿದ್ದಾರೆ. ಅವರಿಗೆ ಶೌರ್ಯ ಎಂಬುದು ತಿಳಿದಿಲ್ಲ, ಹಿಂದೂಗಳ ಮೇಲೆ ಕಲ್ಲು ಹೊಡೆಯಲು ಕಾಂಗ್ರೆಸ್ ಸರ್ಕಾರ ಪುಂಡ ಮುಸ್ಲಿಂರಿಗೆ ಫ್ರೀ ಪರ್ಮಿಟ್ ನೀಡಿದೆ. ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ. ಆದರೆ, ಅವರು ದುಷ್ಕೃತ್ಯಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ? ಅವರು ಹೊಗೋದಾದರೂ ಎಲ್ಲಿಗೆ ? ಎಂದು ಪ್ರಶ್ನಿಸಿದರು.

ಮುಸಲ್ಮಾನರಿಗಾದರೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ, ಹಿಂದೂಗಳಿಗೆ ಯಾವು ದೇಶವಿದೆ? ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಹಾಗೇ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದು ಬಸ್ತಿನಲ್ಲಿರುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಮುಸಲ್ಮಾನರು ತಪ್ಪು ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಜಿ.ಪರಮೇಶ್ವರ್‌ ಅವರಿಗೆ ಗೃಹ ಸಚಿವರಾಗಿರಲು ಯಾವುದೇ ನೈತಿಕತೆ ಇಲ್ಲ. ಇನ್ನು ನಮ್ಮ ರಾಜ್ಯದಲ್ಲಿ ಬುಲ್ಡೋಜರ್‌ ಕಾನೂನು ತರಲು ಯಾರಿಗೆ ಧಮ್‌ ಇದೆ? ಯೋಗಿ ಆದಿತ್ಯನಾತ್‌ ಅವರ ರೀತಿಯಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸಕು ಸಾಧ್ಯನಾ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT