ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ. 
ರಾಜಕೀಯ

'ಕೈ' ಪಾಳಯದಲ್ಲಿ ಬಂಡಾಯ ತಾರಕಕ್ಕೆ: ಬಹಿರಂಗ ಹೇಳಿಕೆ ನೀಡದಿರಿ; ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್!

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ರಾಜಣ್ಣ ಅವರಿಗೆ ಖರ್ಗೆ ಅವರು ಎಚ್ಚರಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಪಟ್ಟ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಬಂಡಾಯ ತಾರಕಕ್ಕೇರಿದ್ದು, ಈ ನಡುವಲ್ಲೇ ಬಹಿರಂಗ ಹೇಳಿಕೆಗಳ ನೀಡದಂತೆ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ರಾಜಣ್ಣ ಅವರಿಗೆ ಖರ್ಗೆ ಅವರು ಎಚ್ಚರಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಪದೆ ಪದೇ ಸಚಿವ ಕೆ.ಎನ್. ರಾಜಣ್ಣ ಪಕ್ಷದ ಶಿಸ್ತಿನ ವಿರುದ್ಧ ಹೇಳಿಕೆ ನೀಡುತ್ತಿದ್ದು, ಡಿಸಿಎಂ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸುತ್ತಿದ್ದಾರೆ.

ಹೀಗಾಗಿ ರಾಜಣ್ಣ ನಡೆಯ ಬಗ್ಗೆ ಡಿಕೆಶಿ ಟೀಂ ತೀವ್ರ ಆಕ್ರೋಶ ಹೊರ ಹಾಕಿದೆ. ಅಷ್ಟೇ ಅಲ್ಲದೇ ಮೊನ್ನೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ದೂರು ಕೊಟ್ಟಿದ್ದಾರೆನ್ನಲಾಗಿದ್ದು, ಇದರ ಬೆನ್ನಲ್ಲೇ ರಾಜಣ್ಣಗೆ ಎಐಸಿಸಿ ಅಧ್ಯಕ್ಷರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಬಲವಾದ ಕಣ್ಣಿಟ್ಟಿರುವ ಸಚಿವ ಜಾರಕಿಹೊಳಿ, ಸಚಿವ ಕೆ.ಎನ್ ರಾಜಣ್ಣ, ಪೂರ್ಣಪ್ರಮಾಣದ ಅಧ್ಯಕ್ಷರ ನೇಮಕಕ್ಕೆ 6 ತಿಂಗಳಿಂದ ಪಟ್ಟು ಹಿಡಿದಿದ್ದಾರೆ. ಇದೆಲ್ಲದರ ಮಧ್ಯೆ ಕೆ.ಎನ್. ರಾಜಣ್ಣ ಯಾರ ಮಾತಿಗೂ ಬಗ್ಗುವಂತೆ ಕಾಣುತ್ತಿರಲಿಲ್ಲ. ಇದೀಗ ಹೈಕಮಾಂಡ್ ನಾಯಕರೇ ನೇರವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

SCROLL FOR NEXT