ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಗೆ ಮಲ್ಲಿಕಾರ್ಜುನ ಖರ್ಗೆ. 
ರಾಜಕೀಯ

'ಕೈ' ಪಾಳಯದಲ್ಲಿ ಬಂಡಾಯ ತಾರಕಕ್ಕೆ: ಬಹಿರಂಗ ಹೇಳಿಕೆ ನೀಡದಿರಿ; ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್!

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ರಾಜಣ್ಣ ಅವರಿಗೆ ಖರ್ಗೆ ಅವರು ಎಚ್ಚರಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಪಟ್ಟ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಬಂಡಾಯ ತಾರಕಕ್ಕೇರಿದ್ದು, ಈ ನಡುವಲ್ಲೇ ಬಹಿರಂಗ ಹೇಳಿಕೆಗಳ ನೀಡದಂತೆ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ರಾಜಣ್ಣ ಅವರಿಗೆ ಖರ್ಗೆ ಅವರು ಎಚ್ಚರಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಪದೆ ಪದೇ ಸಚಿವ ಕೆ.ಎನ್. ರಾಜಣ್ಣ ಪಕ್ಷದ ಶಿಸ್ತಿನ ವಿರುದ್ಧ ಹೇಳಿಕೆ ನೀಡುತ್ತಿದ್ದು, ಡಿಸಿಎಂ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸುತ್ತಿದ್ದಾರೆ.

ಹೀಗಾಗಿ ರಾಜಣ್ಣ ನಡೆಯ ಬಗ್ಗೆ ಡಿಕೆಶಿ ಟೀಂ ತೀವ್ರ ಆಕ್ರೋಶ ಹೊರ ಹಾಕಿದೆ. ಅಷ್ಟೇ ಅಲ್ಲದೇ ಮೊನ್ನೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ದೂರು ಕೊಟ್ಟಿದ್ದಾರೆನ್ನಲಾಗಿದ್ದು, ಇದರ ಬೆನ್ನಲ್ಲೇ ರಾಜಣ್ಣಗೆ ಎಐಸಿಸಿ ಅಧ್ಯಕ್ಷರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಬಲವಾದ ಕಣ್ಣಿಟ್ಟಿರುವ ಸಚಿವ ಜಾರಕಿಹೊಳಿ, ಸಚಿವ ಕೆ.ಎನ್ ರಾಜಣ್ಣ, ಪೂರ್ಣಪ್ರಮಾಣದ ಅಧ್ಯಕ್ಷರ ನೇಮಕಕ್ಕೆ 6 ತಿಂಗಳಿಂದ ಪಟ್ಟು ಹಿಡಿದಿದ್ದಾರೆ. ಇದೆಲ್ಲದರ ಮಧ್ಯೆ ಕೆ.ಎನ್. ರಾಜಣ್ಣ ಯಾರ ಮಾತಿಗೂ ಬಗ್ಗುವಂತೆ ಕಾಣುತ್ತಿರಲಿಲ್ಲ. ಇದೀಗ ಹೈಕಮಾಂಡ್ ನಾಯಕರೇ ನೇರವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ