ಸಿದ್ದರಾಮಯ್ಯ ಮತ್ತು ಎಚ್.ಸಿ ಮಹಾದೇವಪ್ಪ 
ರಾಜಕೀಯ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: CM ತಪ್ಪು ಮಾಡಿಲ್ಲ ಎಂಬುದು ನಮಗೆ ಗೊತ್ತಿತ್ತು- HC ಮಹಾದೇವಪ್ಪ

ಸಿದ್ದರಾಮಯ್ಯ ಮೊದಲಿನಿಂದಲೂ ಗಟ್ಟಿಯಾಗಿದ್ದರು. ಅವರ ಆತ್ಮಸಾಕ್ಷಿ ಎಂದೂ ತಪ್ಪು ಮಾಡಿಲ್ಲವೆಂದು ಹೇಳುತ್ತಿತ್ತು. ನಮಗೂ ಅವರು ತಪ್ಪು ಮಾಡಿಲ್ಲವೆಂದು ಗೊತ್ತಿತ್ತು ಎಂದರು.

ಮೈಸೂರು: ಮುಡಾ ಪ್ರಕರಣದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ವಿಪಕ್ಷಗಳು ರಾಜಕೀಯ ಪಿತೂರಿ ನಡೆಸಿದ್ದವು. ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವುದು ಸಂತೋಷ ತಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲಿನಿಂದಲೂ ಗಟ್ಟಿಯಾಗಿದ್ದರು. ಅವರ ಆತ್ಮಸಾಕ್ಷಿ ಎಂದೂ ತಪ್ಪು ಮಾಡಿಲ್ಲವೆಂದು ಹೇಳುತ್ತಿತ್ತು. ನಮಗೂ ಅವರು ತಪ್ಪು ಮಾಡಿಲ್ಲವೆಂದು ಗೊತ್ತಿತ್ತು ಎಂದರು.

ಪಕ್ಷದ ಹೈಕಮಾಂಡ್ ಈಗಾಗಲೇ ಸಿದ್ದರಾಮಯ್ಯ ಅವರ ನಾಯಕತ್ವವನ್ನು ಅನುಮೋದಿಸಿರುವುದರಿಂದ ಸಿಎಂ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಒತ್ತಿ ಹೇಳಿದರು. "ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಉಳಿಯಬೇಕೆಂದು ಶಾಸಕರು ದೃಢಪಡಿಸಿದ್ದಾರೆ ಮತ್ತು ಹೈಕಮಾಂಡ್ ಕೂಡ ಅದನ್ನೇ ನಿರ್ದೇಶಿಸಿದೆ. ಆದ್ದರಿಂದ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ" ಎಂದು ಮಹದೇವಪ್ಪ ಹೇಳಿದರು. ಬಿಜೆಪಿಯ ಸಂಭಾವ್ಯ ಬದಲಾವಣೆಯ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ವಿರೋಧ ಪಕ್ಷಗಳು ನಡೆಸಿದ ರಾಜಕೀಯ ಪಿತೂರಿ ಕೇಸ್‌ ಇದು. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂದು ನಮಗೂ ಗೊತ್ತಿತ್ತು. ಲೋಕಾಯುಕ್ತ ಕ್ಲೀನ್‌ಚಿಟ್‌ ನೀಡಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ