ಬಿಜೆಪಿ  online desk
ರಾಜಕೀಯ

ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ: ಕಠಿಣ ಕ್ರಮಕ್ಕೆ BJP ಆಗ್ರಹ

ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ.

ಬೆಂಗಳೂರು: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ