ದಿನೇಶ್ ಗುಂಡೂರಾವ್ 
ರಾಜಕೀಯ

ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ?: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್

ಬೊಮ್ಮಾಯಿಯವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ.

ಬೆಂಗಳೂರು: ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿ ಕುರಿತು ವಾಗ್ದಾಳಿ ನಡೆಸಿದ್ದ ಬೊಮ್ಮಾಯಿ ವಿರುದ್ಧ ದಿನೇಶ್ ಗುಂಡೂರಾವ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೊಮ್ಮಾಯಿಯವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ. ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಎಂದು ಪ್ರಶ್ನಿಸಿದ್ದಾರೆ.

ಬೊಮ್ಮಾಯಿಯವರೆ, 2023ರಲ್ಲಿ‌ ನೀವು ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದಿರಿ. ಆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಹಣ ಪಾವತಿ ಯಾರು ಮಾಡಬೇಕು.? ನಿಮ್ಮ ಸ್ವಂತ ಖಜಾನೆಯಿಂದ ಕೊಡುವಂತೆ ಅಪ್ರಸ್ತುತ ಕಾಮಗಾರಿಗಳಿಗೆ ಅನುಮೋದನೆ ಕೊಟ್ಟಾಗ ಪ್ರಜ್ಞೆ ಇರಲಿಲ್ಲವೆ.? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ.?

ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿದ್ದಾಗ ಎಂದಾದರೂ ಕೇಂದ್ರ ಸರ್ಕಾರದ ತೆರಿಗೆ ಅನ್ಯಾಯದ ಬಗ್ಗೆ ಎದೆಯೆತ್ತಿ ಮಾತಾಡಿದ್ದೀರಾ.? ಹೋಗಲಿ‌ ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯಾದರೂ ಬಾಯಿ ಬಿಟ್ಟಿದ್ದೀರಾ.? ಮೋದಿಯವರ ಮುಂದೆ ನಡು ಬಗ್ಗಿಸಿ ನಿಂತಿದ್ದೆ ನಿಮ್ಮ ಸಾಧನೆಯಲ್ಲವೆ.? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ.?

ಬೊಮ್ಮಾಯಿಯವರೆ, ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 58 ಸಾವಿರ ಕೋಟಿ ಮೀಸಲಿರಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಷ್ಟೋ ಮನೆಗಳ ದೀಪ ಉರಿಯುತ್ತಿದೆ ಎಂಬ ಅರಿವು ನಿಮಗರಲಿ. ನಿಮ್ಮ ನೇತೃತ್ವದ ಸರ್ಕಾರವಿದ್ದಾಗ ಯಾವುದಾದರೂ ಒಂದೇ ಒಂದು ಜನಪರ ಕಾರ್ಯಕ್ರಮ ಮಾಡಿದ ಉದಾಹರಣೆ ಇದೆಯೆ.? ರಾಜ್ಯದ ಖಜಾನೆ ಲೂಟಿ ಹೊಡದಿದ್ದೆ ನಿಮ್ಮ ಸರ್ಕಾರದ ಹೆಗ್ಗಳಿಕೆಯಲ್ಲವೆ.? ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

SCROLL FOR NEXT