ಡಿಕೆ ಶಿವಕುಮಾರ್ IANS
ರಾಜಕೀಯ

ನನ್ನ ಸ್ಥಾನ ಏನೇ ಇರಲಿ, ಪಕ್ಷವನ್ನು ಮುನ್ನಡೆಸುವುದು ನನ್ನ ಕರ್ತವ್ಯ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರನ್ನು ಬದಲಾಯಿಸುವಂತೆ ಪಕ್ಷದ ಕೆಲವು ನಾಯಕರು ಹೈಕಮಾಂಡ್‌ಗೆ ಮನವಿ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಮತ್ತು ಮುಖ್ಯಮಂತ್ರಿಯಾಗುವ ಬಯಕೆಯನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಸ್ಥಾನ ಏನೇ ಇರಲಿ, 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವುದಾಗಿ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರನ್ನು ಬದಲಾಯಿಸುವಂತೆ ಪಕ್ಷದ ಕೆಲವು ನಾಯಕರು ಹೈಕಮಾಂಡ್‌ಗೆ ಮನವಿ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರಿಗೆ, 2028ರ ಚುನಾವಣೆಗಳು ನಿಮ್ಮ ನೇತೃತ್ವದಲ್ಲಿ ನಡೆಯುತ್ತವೆಯೇ ಎಂದು ಪ್ರಶ್ನಿಸಿದ್ದಕ್ಕೆ, ನಾನು ಆ ಸಮಯದಲ್ಲಿ ಯಾವುದೇ ಹುದ್ದೆಯನ್ನು ಹೊಂದಿದ್ದರೂ, ಪಕ್ಷವನ್ನು ಮುನ್ನಡೆಸುವುದು ನನ್ನ ಕರ್ತವ್ಯ. ಹುದ್ದೆಗಳು ನಾಯಕತ್ವವನ್ನು ನಿರ್ಧರಿಸುವುದಿಲ್ಲ. ನಾಯಕತ್ವ, ಬದ್ಧತೆ ಮತ್ತು ದೃಷ್ಟಿಕೋನವು ಪಕ್ಷವನ್ನು ಮುನ್ನಡೆಸುತ್ತದೆ. ನಾನು ಏನಾಗುತ್ತೇನೆ ಎಂಬುದು ಮುಖ್ಯವಲ್ಲ, ನನಗೆ ವಹಿಸಿಕೊಟ್ಟ ಅಧಿಕಾರದೊಂದಿಗೆ ಪಕ್ಷವನ್ನು ಬಲಪಡಿಸುವುದು ಮತ್ತು ನಿಜವಾದ ಕಾಂಗ್ರೆಸ್ಸಿಗನಾಗಿ ಮುನ್ನಡೆಸುವುದು ಮುಖ್ಯ ಎಂದರು.

ದೆಹಲಿ ಪ್ರವಾಸದ ವೇಳೆ ಯಾವ ಎಐಸಿಸಿ ನಾಯಕರನ್ನು ಭೇಟಿಯಾಗುತ್ತೀರಿ ಎಂದು ಕೇಳಿದ್ದಕ್ಕೆ, ನಾನು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣಿಸುತ್ತಿದ್ದೇನೆ. ಸಮ್ಮೇಳನಕ್ಕಾಗಿ ರಾಜಸ್ಥಾನಕ್ಕೆ ಭೇಟಿ ನೀಡಿದ್ದಾಗ, ನಮ್ಮ ನೀರಾವರಿ ಯೋಜನೆಗಳ ಬಗ್ಗೆ ನಾನು ಕಳವಳ ವ್ಯಕ್ತಪಡಿಸಿದೆ. ಸಚಿವರು ನಾಳೆ ಸಭೆಗೆ ಸಮಯ ನೀಡಿದ್ದಾರೆ. ಕಡತಗಳು ನಮ್ಮ ರಾಜ್ಯದವರಾದ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರ ಮೂಲಕ ಮುಂದುವರಿಯಬೇಕು. ಅವರಿಲ್ಲದೆ ನಾನು ವಿಷಯಗಳನ್ನು ಚರ್ಚಿಸುವುದು ಸೂಕ್ತವಲ್ಲ. ನಾನು ಸೋಮಣ್ಣ ಅವರಿಗೂ ಪತ್ರ ಬರೆದಿದ್ದೇನೆ. ಸಭೆಯನ್ನು ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರ ನಡುವೆ ನಿಗದಿಪಡಿಸಲಾಗಿದೆ ಎಂದರು.

ನಮ್ಮ ಅಧಿಕಾರಿಗಳು ಇಂದು ಪ್ರಾಥಮಿಕ ಚರ್ಚೆಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ನಂತರ, ಸಮಯ ಅನುಮತಿಸಿದರೆ ಮತ್ತು ನಮ್ಮ ದೆಹಲಿ ನಾಯಕರು ಲಭ್ಯವಿದ್ದರೆ, ನಾನು ಅವರನ್ನೂ ಭೇಟಿ ಮಾಡುತ್ತೇನೆ. ಎಐಸಿಸಿ ಕಚೇರಿ ನಮಗೆ ದೇವಾಲಯದಂತೆ, ಆದ್ದರಿಂದ ನಾನು ಅಲ್ಲಿಗೂ ಭೇಟಿ ನೀಡುತ್ತೇನೆ. ಮರುದಿನ ಬೆಳಿಗ್ಗೆ, ಸದ್ಗುರುಗಳು ಇಶಾ ಫೌಂಡೇಶನ್‌ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ ಮತ್ತು ನಾನು ಅದಕ್ಕೆ ಹಾಜರಾಗುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT