ಪ್ರಿಯಾಂಕ್ ಖರ್ಗೆ 
ರಾಜಕೀಯ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ, ಮಣಿಕಂಠ ರಾಠೋಡ್ ಆಡಿಯೋ ಬಿಡುಗಡೆ

ಮಣಿಕಂಠ ರಾಠೋಡ್‌ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಬೆಂಗಳೂರು: ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಹಾಗಿದ್ದರೂ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಚಿನ್ ಪಾಂಚಲ್ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಗಳಲ್ಲಿ ಹೊಂದಾಣಿಕೆ ಇಲ್ಲ ಎಂದರು.

ಸಂತೋಷ್ ಪಾಟೀಲ್ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022, ಏಪ್ರಿಲ್ 12 ರಂದು ಉಡುಪಿಯ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುತ್ತಿಗೆದಾರರ ಸಂತೋಷ್ ಪಾಟೀಲ್ ಡೆತ್ ನೋಟ್ ನಲ್ಲಿ ಅಂದಿನ ಸಚಿವ ಕೆ.ಎಸ್ ಈಶ್ವರಪ್ಪ ಅವರ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ, ಹೆಂಡತಿ ಮಕ್ಕಳಿಗೆ ಪರಿಹಾರ ಕೊಡಬೇಕು ಎಂದು ಹೇಳಿದ್ದರು. ಆದರೆ ಸಚಿನ್ ಪಾಂಚಲ್ ಡೆತ್ ನೋಟ್ ನಲ್ಲಿ ನನ್ನ ಹೆಸರು ಏಲ್ಲಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಸಂತೋಷ್ ಪಾಟೀಲ್ ಕುಟುಂಬಕ್ಕೆ ಬಿಜೆಪಿಗರು ಸಹಾಯ ಮಾಡಿದ್ದಾರಾ? ಸಂತೋಷ್ ಪಾಟೀಲ್ ಕುಟುಂಬವನ್ನು ಬಿಜೆಪಿಯವರು ಇದುವರೆಗೂ ಏಕೆ ಭೇಟಿ ಮಾಡಿಲ್ಲ? ಕೇವಲ ಮೊಸಳೆ ಕಣ್ಣೀರು ಸುರಿಸಿದರೆ ರಾಜ್ಯದ ಜನ ಮೋಸ ಹೋಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಧ್ವನಿಯುಳ್ಳ ಆಡಿಯೋವೊಂದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ.

ಈ ಮಣಿಕಂಠ ರಾಠೋಡ್‌ ಮೇಲೆ ಸುಮಾರು 20ರಿಂದ 30 ಪ್ರಕರಣಗಳು ದಾಖಲಾಗಿವೆ. ಆದರೂ ಬಿಜೆಪಿ ಈತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಣಿಕಂಠ ರಾಠೋಡ್‌ ನೇತೃತ್ವದಲ್ಲೇ ಬಿಜೆಪಿ 'ಕಲಬುರಗಿ ಚಲೋ' ಹಮ್ಮಿಕೊಂಡಿದೆ ಎಂದು ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT