ವಿಜಯೇಂದ್ರ- ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜಕೀಯ

ಹೈಕಮಾಂಡ್'ಗೆ ದೂರು ನೀಡಲ್ಲ, ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗಿಲ್ಲ: ಯತ್ನಾಳ್

ಪಕ್ಷದ ವರಿಷ್ಠರು ಕರೆದರೆ ಮಾತ್ರ ದೆಹಲಿಗೆ ಹೋಗುತ್ತೇವೆ. ಮಾತನಾಡುತ್ತೇವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವತಃ ಕರೆದರೂ ಮಾತುಕತೆ ಸಾಧ್ಯವಿಲ್ಲ. ನಮ್ಮದು ನಿಷ್ಠರ ಬಣ.

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗಿಲ್ಲ, ಅವರಾಗಿಯೇ ಬಂದು ನನ್ನ ಜೊತೆ ಮಾತನಾಡಿಸಿದರೂ ನಾನು ಮಾತನಾಡುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಕರೆದರೆ ಮಾತ್ರ ದೆಹಲಿಗೆ ಹೋಗುತ್ತೇವೆ. ಮಾತನಾಡುತ್ತೇವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವತಃ ಕರೆದರೂ ಮಾತುಕತೆ ಸಾಧ್ಯವಿಲ್ಲ. ನಮ್ಮದು ನಿಷ್ಠರ ಬಣ. ವಿಜಯೇಂದ್ರ ಪಕ್ಷದ ಅಧ್ಯಕ್ಷ ಅಷ್ಟೇ, ಅವರ ಜೊತೆ ಗುರುತಿಸಿಕೊಂಡವರೂ ಹೋರಾಟಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದರು.

ಬಿಜೆಪಿಯಿಂದ ನನ್ನನ್ನು ಏಕೆ ಉಚ್ಚಾಟನೆ ಮಾಡುತ್ತಾರೆ. ಉಚ್ಚಾಟನೆ ಮಾಡಲು ನಾನು ಯಾರ ಜತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್‌ ಅಹಮದ್‌ ಖಾನ್‌ ಜೊತೆಗೂ ನನಗೆ ಹೊಂದಾಣಿಕೆ ಇಲ್ಲ. ಇಂತಹ ವಿಷಯಗಳು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ತಿಳಿಸಿದರು.

ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರ ಕುರಿತು ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ಪಕ್ಷದ ಅಧ್ಯಕ್ಷ. ಸಹಜವಾಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಾರೆ. ನಮ್ಮ ವಿರುದ್ಧ ದೂರು ಕೊಟ್ಟ ಬಗ್ಗೆ ಮಾಹಿತಿ ಇಲ್ಲ. ನಮಗೆ ಇನ್ನೊಬ್ಬರ ಮೇಲೆ ದೂರು ಕೊಟ್ಟು ಅಭ್ಯಾಸವೂ ಇಲ್ಲ. ಕಾಂಗ್ರೆಸ್‌ ಭಿಕ್ಷೆಯಿಂದ ಶಾಸಕರೂ ಆಗಿಲ್ಲ ಎಂದರು.

ಇನ್ನು ವಕ್ಫ್‌ ವಿರೋಧಿ ಎರಡನೇ ಹಂತದ ರಾಜ್ಯ ಪ್ರವಾಸದ ಕುರಿತು ನಾಳೆ (ಜ.03-ಶುಕ್ರವಾರ) ನಡೆಯಲಿರುವ ಸಭೆಯಲ್ಲಿ ತೀರ್ಮಾನವಾಗಲಿದ್ದು, ವಕ್ಫ್‌ ವಿರೋಧಿ ಹೋರಾಟದ ಮಹತ್ವವನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವುದಾಗಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT