ಸಚಿವ ಪ್ರಿಯಾಂಕ್ ಖರ್ಗೆ  
ರಾಜಕೀಯ

BJP ತಾಳಕ್ಕೆ ತಕ್ಕಂತೆ ನಮ್ಮ ಸರ್ಕಾರ ಕುಣಿಯಲು ಸಾಧ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರಿಗೇಕೆ ಸಿಬಿಐ ಮೇಲೆ ಅಷ್ಟೊಂದು ಪ್ರೀತಿ. ಬಿಜೆಪಿಯ ಸ್ಕ್ರಿಪ್ಟ್ ಪ್ರಕಾರ ನಡೆಯಲು ನಮಗೆ ಸಾಧ್ಯವಿಲ್ಲ. ಒಂದು ಜೀವ ಕಳೆದು ಹೋಗಿದೆ, ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ಬೆಂಗಳೂರು: ಸರ್ಕಾರ ಬಿಜೆಪಿ ತಾಳಕ್ಕೆ ತಕ್ಕಂತೆ ಕುಣಿಯಲು ಸಾಧ್ಯವಿಲ್ಲ. ಗುತ್ತಿಗೆದಾರ ಸಚಿನ್ ಪ್ರಕರಣದ ಸಂಬಂಧ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಸಚಿನ್ ಕುಟುಂಬಕ್ಕೂ ಭರವಸೆ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಪಾಂಚಾಳ್ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಲಾಗಿದೆ. ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯಲು ನಮಗೆ ಸಾಧ್ಯವಿಲ್ಲ. ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಕುಟುಂಬಕ್ಕೆ ಭರವಸೆ ನೀಡಿದ್ದೇನೆ. ಸಿಐಡಿ ಪ್ರಾಥಮಿಕ ತನಿಖೆಯ ನಂತರ ಕೆಲವು ವಿಷಯಗಳು ಹೊರಬೀಳಲಿದ್ದು, ಅದನ್ನು ಕುಟುಂಬ ಸದಸ್ಯರ ಗಮನಕ್ಕೂ ತರಲಾಗುವುದು ಎಂದು ಹೇಳಿದರು.

ಬಿಜೆಪಿಯವರಿಗೇಕೆ ಸಿಬಿಐ ಮೇಲೆ ಅಷ್ಟೊಂದು ಪ್ರೀತಿ. ಬಿಜೆಪಿಯ ಸ್ಕ್ರಿಪ್ಟ್ ಪ್ರಕಾರ ನಡೆಯಲು ನಮಗೆ ಸಾಧ್ಯವಿಲ್ಲ. ಒಂದು ಜೀವ ಕಳೆದು ಹೋಗಿದೆ, ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.

ಸಚಿನ್ ಪಾಂಚಾಳ್ ಸಹೋದರಿ ಮೋದಿಯವರಿಗೆ ಪತ್ರ ಬರೆಯುತ್ತೇನೆಂದು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಿಐಡಿ ತನಿಖೆ ಪ್ರಾರಂಭವಾಗಿ ಎರಡು ದಿನಗಳಾಗಿವೆ. ಈಗಾಗಲೇ ಅವರು ಸ್ಥಳ ಪರಿಶೀಲನೆ (ಮಹಜರ್) ಮಾಡಿದ್ದಾರೆ. ಪಾರದರ್ಶಕವಾಗಿ ತನಿಖೆ ನಡೆಸುವುದು ಸರ್ಕಾರದ ಕೆಲಸ ಎಂದರು.

ಗಂಗಾ ಕಲ್ಯಾಣ ಹಗರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ರಾ?. ಪಿಎಸ್​​ಐ ಹಗರಣವನ್ನು ಕೊಟ್ಟಿದ್ರಾ?. ಇವರ ಅವಧಿಯಲ್ಲಿ ಎಷ್ಟು ಕೇಸ್​ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ?. ಮಾನವ ಸಂಪನ್ಮೂಲ ಇಲ್ಲ ಸುಮ್ಮನೆ ಕೊಡಬೇಡಿ ಎಂದು ಸಿಬಿಐನವರೇ ಹೇಳಿದ್ದಾರೆ. ಇವರು ಹೇಳಿದಂತೆ ಮಾಡುವುದಕ್ಕೆ ಇರುವುದಾ ನಾವು?. ಅವರ ಸ್ಕ್ರಿಫ್ಟ್​​ಗೆ ನಾವು ಕುಣಿಯುವುದಕ್ಕೆ ಆಗುತ್ತಾ?. ಪ್ರತಿಪಕ್ಷದಲ್ಲಿ ಇದ್ದವರು ಜವಾಬ್ದಾರಿಯುತವಾಗಿ ಇರಬೇಕು ಎಂದು ಕಿಡಿಕಾರಿದರು.

ಸಚಿನ್ ಪಾಂಚಾಲ್ ಬಗ್ಗೆ ಮಾತಾಡಿರುತ್ತಿರುವ ಬಿಡೆಪಿಯವರು ಹಿಂದೆ ತಮ್ಮ ಅಧಿಕಾರಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿತ್ತಾ? ಅವರಿಗೆ ಸಹಾಯ ಮಾಡಬೇಕಿತ್ತು. ವಿಜಯೇಂದ್ರ ಸಂತೋಷ್ ಮನೆಗೆ ಹೋಗಿದ್ದರಾ? ಪ್ರಕರಣದಲ್ಲಿ ರಾಜಕೀಯ ಬೆರೆಸದೇ ಪಾಂಚಾಳ್ ಕುಟುಂಬಕ್ಕೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ.

ಇವರಲ್ಲಿ ಇರುವ ಹುಳುಕು ನಾವು ತಯಾರು ಮಾಡಿದ್ದಾ? ಕಲಬುರಗಿಯಲ್ಲಿ ಎಂಥವರಿಗೆ ಟಿಕೆಟ್ ಕೊಟ್ಟಿದ್ದಾರೆ. ವಿಪಕ್ಷ ನಾಯಕ ಅಶೋಕ್ ಮಾತಾಡಿದ್ದು ಸಂಸ್ಕೃತಿಯೇ? ಸಿ.ಟಿ.ರವಿ ಹೆಣ್ಣುಮಕ್ಕಳ ಬಗ್ಗೆ ಅವಾಚ್ಯವಾಗಿ ನಿಂದನೆ ಮಾಡುತ್ತಾರೆ. ಮುನಿರತ್ನ ಜಾತಿ ನಿಂದನೆ ಮಾಡುತ್ತಾರೆ. ಇದೇನಾ ನಿಮ್ಮ ಸಂಸ್ಕೃತಿ? ಮಹಿಳೆಯರ ಮೇಲೆ, ಅಧಿಕಾರಿಗಳ ಮೇಲೆ ದರ್ಪ ತೋರುವುದು ನಿಮ್ಮ ಸಂಸ್ಕೃತಿಯೇ? ನನ್ನ ಬಗ್ಗೆ ಮಾತನಾಡುವಾಗ ನಾಲಿಗೆಗೆ ಲಗಾಮು ಇರಲಿ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT