ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  online desk
ರಾಜಕೀಯ

ಜಾರಕಿಹೊಳಿ‌ ಮನೆಯಲ್ಲಿ ಔತಣಕೂಟ; ಸಿಎಂ ಹುದ್ದೆ ಉಳಿಸಿಕೊಳ್ಳಲು ಸಿದ್ದು ರಣತಂತ್ರ: BJP

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಇದು ಸಿದ್ದರಾಮಯ್ಯ ಅವರ ಸ್ಥಾನವನ್ನು ಬಲಪಡಿಸುವ ಪ್ರಯತ್ನವನ್ನು ಸೂಚಿಸುತ್ತದೆ.

ಶಿವಮೊಗ್ಗ: ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ. ಇದು ಸಿದ್ದರಾಮಯ್ಯ ಅವರ ಸ್ಥಾನವನ್ನು ಬಲಪಡಿಸುವ ಪ್ರಯತ್ನವನ್ನು ಸೂಚಿಸುತ್ತದೆ ಎಂದು ಹೇಳಿದರು.

ನಾನು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದಾಗ ವಿಜಯೇಂದ್ರ ಭವಿಷ್ಯ ಹೇಳ್ತಾರಾ ಎಂದು ಸಿದ್ದರಾಮಯ್ಯ ಹೇಳಿದ್ದರು. ನಾನು ಹೇಳಿದ್ದು ಏನು ಎಂದು ಮುಂದೆ ಗೂತ್ತಾಗುತ್ತದೆ. ಔತಣಕೂಟದಿಂದ ಎಲ್ಲವು ಸರಿ ಇಲ್ಲ ಎಂದು ತಿಳಿದು ಬರುತ್ತದೆ. ಸಿದ್ದುರಾಮಯ್ಯ ಬಜೆಟ್ ನಂತರ ರಾಜೀನಾಮೆ ನೀಡುತ್ತಾರೆ ಎಂಬ ಅಂಶ ಚರ್ಚೆಗೆ ಬಂದಿದೆ.

ಇದರಿಂದ ಔತಣಕೂಟದ ಮೂಲಕ ತಮ್ಮ ರಾಜಕೀಯ ದಾಳ ಬಿಟ್ಟಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡಲು ತಯಾರಿಲ್ಲ. ಆದರೆ, ಸಿದ್ದರಾಮಯ್ಯ ಅವರನ್ನು ಮುಂದುವರೆಸಲು ಅವರ ವಿರೋಧಿ ತಂಡ ಬಿಡುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದು v/s ಯುದ್ದ ಎಂಬಾಂತೆ ಆಗಿದೆ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT