ಸಿಎಂ ಸಿದ್ದರಾಮಯ್ಯ 
ರಾಜಕೀಯ

ಸಂಪುಟ ಸಹೋದ್ಯೋಗಿಗಳೊಂದಿಗಿನ ಔತಣಕೂಟದಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ಸಂಪುಟ ಸಹೋದ್ಯೋಗಿಗಳು ಒಟ್ಟಿಗೆ ಸೇರಿದೆ. ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವ. ಕೆಲವರು ಇದಕ್ಕೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ. ಔತಣಕೂಟ ನಡೆಸುವುದರಲ್ಲಿ ತಪ್ಪೇನಿದೆ.

ದಾವಣಗೆರೆ: ಇತ್ತೀಚೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ನಡೆಸಿದ ಔತಣಕೂಟದಲ್ಲಿ ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಇಲ್ಲಸಲ್ಲದ ಸುದ್ದಿಗಳನ್ನು ಸೃಷ್ಟಿಸುತ್ತಿವೆ. ಸಂಪುಟ ಸಹೋದ್ಯೋಗಿಗಳು ಒಟ್ಟಿಗೆ ಸೇರಿದೆ. ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವ. ಕೆಲವರು ಇದಕ್ಕೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ. ಔತಣಕೂಟ ನಡೆಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿನ ಬದಲಾವಣೆ ಸುದ್ದಿ ಕುರಿತು ಮಾತನಾಡಿ, ನಮ್ಮಿಂದ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲು ಸಾಧ್ಯವೇ? ಈ ಕುರಿತ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು. ಎಂದು ತಿಳಿಸಿದರು.

ಬಸ್ ದರ ಹೆಚ್ಚಳದ ಕುರಿತು ಮಾತನಾಡಿ, ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಸ್ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹೆಚ್ಚಾಗಿದೆ ಮತ್ತು ಸಾರಿಗೆ ನಿಗಮಗಳಲ್ಲಿ ಡೀಸೆಲ್ ಬೆಲೆಗಳು ಮತ್ತು ವೇತನವನ್ನಬೂ ಹೆಚ್ಚಳ ಮಾಡಲಾಗಿದೆ. ಆದ್ದರಿಂದ, ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿತ್ತು ಎಂದರು.

ಬಸ್ ದರವನ್ನು ಹೆಚ್ಚಿಸುವ ಬೇಡಿಕೆಯೂ ಬಹಳ ದಿನಗಳಿಂದ ಇತ್ತು, ಆದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT