ಡಿಸಿಎಂ ಡಿ.ಕೆ ಶಿವಕುಮಾರ್ 
ರಾಜಕೀಯ

ಊಟದಲ್ಲಿ ರಾಜಕೀಯ ಏಕೆ ಬೆರೆಸುತ್ತೀರಿ; ಇಲ್ಲಸಲ್ಲದ ಅರ್ಥ ಏಕೆ ಕಲ್ಪಿಸುತ್ತೀರಿ?: ಮಾಧ್ಯಮಗಳಿಗೆ ಡಿ.ಕೆ ಶಿವಕುಮಾರ್ ಪ್ರಶ್ನೆ

ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು.

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.

ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?” ಎಂದರು.

ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT