ಪರಮೇಶ್ವರ್  
ರಾಜಕೀಯ

ಡಿ.ಕೆ ಶಿವಕುಮಾರ್ ವಿರುದ್ಧ ಪರಮೇಶ್ವರ್ ಶಕ್ತಿ ಪ್ರದರ್ಶನ: SC- ST ಶಾಸಕರಿಗೆ ಭೂರಿ ಭೋಜನ!

ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜನವರಿ 2 ರಂದು ವಿದೇಶದಲ್ಲಿದ್ದಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಭಾಗವಹಿಸಿದ್ದರು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೋಟೆಲ್‌ನಲ್ಲಿ ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲಿದ್ದಾರೆ.

ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಎದುರಿಸಲು ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಶಾಸಕರು ಮತ್ತು ಎಂಎಲ್‌ಸಿಗಳು ‘ಮೆಗಾ ಪ್ಲಾನ್’ ಭಾಗವಾಗಿದ್ದಾರೆ ಎಂದು ಮೂಲವೊಂದು ಟಿಎನ್‌ಐಇಗೆ ತಿಳಿಸಿದೆ.

ಮಲೇಷ್ಯಾದಲ್ಲಿರುವ ಪರಮೇಶ್ವರ ಅವರು ಎಸ್‌ಸಿ ಸಮುದಾಯದ ಆಂತರಿಕ ಕೋಟಾ, ಎಸ್‌ಸಿ/ಎಸ್‌ಟಿ ಸಮುದಾಯಗಳ ಬೃಹತ್ ರ‍್ಯಾಲಿ ಸೇರಿದಂತೆ ನಾನಾ ವಿಷಯಗಳ ಚರ್ಚೆ ನೆಪದಲ್ಲಿ ಶಾಸಕರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ವಾಸ್ತವವಾಗಿ, ಜಾರಕಿಹೊಳಿ ಆಯೋಜಿಸಿದ್ದ ಔತಣಕೂಟದಲ್ಲಿ, ಶಿವಕುಮಾರ್ ಅವರನ್ನು ಎದುರಿಸುವ ಕಾರ್ಯತಂತ್ರದ ಭಾಗವಾಗಿ ಯೋಜನೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ, ಅವರಲ್ಲಿ ಎಷ್ಟು ಮಂದಿ ಔತಣಕೂಟಕ್ಕೆ ಹಾಜರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ 39,272 ಕೋಟಿ ರೂ ಇನ್ನೂ ಬಿಡುಗಡೆಯಾಗಬೇಕಿದೆ. ಎಸ್‌ಸಿಪಿ/ಟಿಎಸ್‌ಪಿ ನಿಧಿಯ ಬಗ್ಗೆ ಯಾರೋಬ್ಬರು ಧ್ವನಿ ಎತ್ತಿರಲಿಲ್ಲ, ಸಂಬಂಧಪಟ್ಟ ಮಂಡಳಿಗಳು ಮತ್ತು ನಿಗಮಗಳಿಗೆ ಕೇವಲ 600 ಕೋಟಿ ರೂ.ಗಳನ್ನು ನೀಡಲಾಗಿದ್ದು, ಅದರಲ್ಲಿ ಒಂದು ರೂಪಾಯಿಯೂ ಬಳಕೆಯಾಗುತ್ತಿಲ್ಲ ಹೀಗಾಗಿ ಸಭೆಯಲ್ಲಿ ಅವರನ್ನು ಪ್ರಶ್ನಿಸಲಿದ್ದೇವೆ ಎಂದು ಶಾಸಕರೊಬ್ಬರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT