ಡಿಸಿಎಂ ಡಿಕೆಶಿವಕುಮಾರ್-ಸಚಿವ ಕೆಎನ್ ರಾಜಣ್ಣ- ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಪೂರ್ಣಾವಧಿ ಸಿಎಂ ಆಗಿ: ಡಿಕೆಶಿಗೆ ಸಚಿವ ರಾಜಣ್ಣ ಸಲಹೆ

ಮಾರ್ಚ್ ನಂತರ ರಾಜ್ಯದಲ್ಲಿ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ ರಾಜಣ್ಣ ಅವರ ಈ ಸಲಹೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಸ್ತುತ ಸರ್ಕಾರದ ಉಳಿದ ಎರಡೂವರೆ ವರ್ಷಗಳ ಅವಧಿಗಾಗಿ ಸಿಎಂ ಹುದ್ದೆಯ ಮೇಲೆ ಕಣ್ಣಿಡುವ ಬದಲು, ತಮ್ಮ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಪೂರ್ಣಾವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಸಚಿವ ಕೆ.ಎನ್. ರಾಜಣ್ಣ ಅವರು ಶುಕ್ರವಾರ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆಯ್ದ ದಲಿತ ಮತ್ತು ಎಸ್‌ಟಿ ಸಚಿವರೊಂದಿಗೆ ಭೋಜನಕೂಟ ನಡೆಸಿದ ನಂತರ ಕೆಎನ್ ರಾಜಣ್ಣ ಈ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಮಾರ್ಚ್ ನಂತರ ರಾಜ್ಯದಲ್ಲಿ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ ರಾಜಣ್ಣ ಅವರ ಈ ಸಲಹೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಸಿದ್ದರಾಮಯ್ಯ ಅವರ ಆಪ್ತಮಿತ್ರರೆಂದು ಪರಿಗಣಿಸಲಾದ ಸಹಕಾರ ಸಚಿವ ರಾಜಣ್ಣ ಅವರು ಸಿಎಂ ಸಿಎಂ ಭೋಜನಕೂಟದ ಸಭೆಯಲ್ಲಿ ಭಾಗವಹಿಸಿದ್ದರು.

"ಒಬ್ಬ ಮನುಷ್ಯನಾಗಿ, ಅಧಿಕಾರದ ಆಸೆ ಸಹಜ. ಅವರು(ಶಿವಕುಮಾರ್) ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಆಸಕ್ತಿ ಅಥವಾ ಆಸೆ ಇರುವುದು ತಪ್ಪು ಎಂದು ನನಗೆ ಅನಿಸುವುದಿಲ್ಲ. ಹಿಂದಿನ(2023) ಚುನಾವಣೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇತೃತ್ವದಲ್ಲಿ ನಡೆದಿದೆ. ಮತ್ತು ಜನರು ನಮ್ಮನ್ನು(ಕಾಂಗ್ರೆಸ್) ಆಶೀರ್ವದಿಸಿದರು" ಎಂದು ರಾಜಣ್ಣ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ಹೈಕಮಾಂಡ್ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದೆ. ಅವರು ಸಿಎಂ ಆಗಿದ್ದಾರೆ ಮತ್ತು ಅವರು ಬಯಸಿದರೆ ಭವಿಷ್ಯದಲ್ಲಿ ನಾಯಕನನ್ನು ಬದಲಾಯಿಸುವ ಅಧಿಕಾರವನ್ನು ಹೊಂದಿದ್ದಾರೆ ಮತ್ತು ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದರು.

"ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಹೋಗೋಣ ಮತ್ತು ಅವರ ನೇತೃತ್ವದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದರಿಂದ, ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಲಿ, ಈಗ ಎರಡೂವರೆ ವರ್ಷಕ್ಕಾಗಿ ಏಕೆ ಹೋರಾಡಬೇಕು?" ಎಂದರು.

ನಾನು ಕೇವಲ ಎರಡೂವರೆ ವರ್ಷ ಅಧಿಕಾರಕ್ಕಾಗಿ ಹೋರಾಡಬೇಡಿ. ಐದು ವರ್ಷ ಪೂರ್ಣಾವಧಿ ಸಿಎಂ ಆಗಲು ಹೋರಾಡಿ ಎಂದು ಅವರಿಗೆ ಸಲಹೆ ನೀಡುತ್ತನೆ ಎಂದರು.

ನೀವು ಶಿವಕುಮಾರ ಅವರ ಸಂಪುಟದಲ್ಲಿ ಅವಕಾಶ ಸಿಕ್ಕರೆ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಯಾರ ಸಂಪುಟದಲ್ಲೂ ಸಚಿವರಾಗುವ ನಿರೀಕ್ಷೆಯಿಲ್ಲ ಎಂದರು.

ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೋಮ ಹವನದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನಮಗೆ ಹೋಮ ಹವನದ ಮೇಲೆ ನಂಬಿಕೆ ಇಲ್ಲ. ಡಿ.ಕೆ ಶಿವಕುಮಾರ್ ಗೆ ದೇವರ ಮೇಲೆ ನಂಬಿಕೆ ಇದೆ, ಅದಕ್ಕೆ ಮಾಡಿಸಿರಬಹುದು. ನನ್ನ ಮೇಲೆಯೂ ಹಿಂದೆ ವಾಮಾಚಾರ ಮಾಡಿಸಿದ್ದರು, ಅದನ್ನು ನಾನು ಅನುಭವಿಸಿದ್ದೆ. ಆದರೆ ಅದನೆಲ್ಲಾ ನಾನು ನಂಬಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT