ರಾಹುಲ್ ಗಾಂಧಿ 
ರಾಜಕೀಯ

'ಫೈಟಿಂಗ್‌‌ ವಿತ್ ಇಂಡಿಯನ್‌ ಸ್ಟೇಟ್': ರಾಹುಲ್ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನೂ ಪರೋಕ್ಷವಾಗಿ ನಗರ ನಕ್ಸಲರನ್ನಾಗಿಸಿದ್ದಾರೆ- BJP

ವಿದೇಶಿ ಕೈಗೊಂಬೆ ಆಗಿರುವ ರಾಹುಲ್ ಅವರ ಹೋರಾಟದ ಗುಟ್ಟು ರಟ್ಟಾಗಿದೆ. ವಿದೇಶದಲ್ಲಿರುವ ಭಾರತ ವಿರೋಧಿಗಳ ಜತೆ ಸೇರಿಕೊಂಡು ಇಂದು ಭಾರತದ ಒಳಗೆ ಭಾರತದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿಯವರು ಯಾರಿಗಾಗಿ ಹೋರಾಟ ಮಾಡುತ್ತಿದ್ದಾರೆ?

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ, ನಾವು ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಅದರ ಪ್ರಭಾವಕ್ಕೆ ಒಳಪಟ್ಟಿರುವ ಭಾರತದ ರಾಜ್ಯ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದ್ದೇವೆಂಬ ಎಂಬ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಿಡಿಮಿಡಿಗೊಂಡಿದೆ.

ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ವಿದೇಶಿ ಕೈಗೊಂಬೆ ಆಗಿರುವ ರಾಹುಲ್ ಅವರ ಹೋರಾಟದ ಗುಟ್ಟು ರಟ್ಟಾಗಿದೆ. ವಿದೇಶದಲ್ಲಿರುವ ಭಾರತ ವಿರೋಧಿಗಳ ಜತೆ ಸೇರಿಕೊಂಡು ಇಂದು ಭಾರತದ ಒಳಗೆ ಭಾರತದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿಯವರು ಯಾರಿಗಾಗಿ ಹೋರಾಟ ಮಾಡುತ್ತಿದ್ದಾರೆ? ಯಾವ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ? ಉತ್ತರಿಸಬಲ್ಲರಾ? ಎಂದು ಪ್ರಶ್ನಿಸಿದೆ.

ಸಂಸದ ಲೆಹರ್ ಸಿಂಗ್ ಅವರು ಟ್ವೀಟ್ ಮಾಡಿ, ರಾಹುಲ್ ಗಾಂಧಿ ವಿದೇಶಿ ರಜೆಯಿಂದ ಹಿಂತಿರುಗಿ ಬಂದಿದ್ದಾರೆ. ಭಾರತದ ರಾಜ್ಯ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದ್ದೇವೆಂದು ಹೇಳಿದ್ದಾರೆ. ಈ ಹೇಳಿಕೆ ಮೂಲಕ ಇಷ್ಟು ದಿನ ನಮ್ಮಲ್ಲಿದ್ದ ಅನುಮಾನವನ್ನು ಖಚಿತಪಡಿಸಿದ್ದಾರೆ. ಇದಕ್ಕೆ ಅವರಿಗೆ ಧನ್ಯವಾದ ಹೇಳಬೇಕು. ಇಲ್ಲಿಯವರೆಗೆ ನಕ್ಸಲೀಯರು ಮಾತ್ರ ಭಾರತದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ನಾವು ಭಾವಿಸಿದ್ದೆವು. ಇಂದು ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ನಕ್ಸಲೀಯರು, ನಗರ ನಕ್ಸಲರನ್ನಾಗಿ ಮಾಡಿದ್ದಾರೆಂದು ಹೇಳಿದ್ದಾರೆ.

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ನಕ್ಸಲೀಯರಿಗೆ ಶರಣಾಗತಿ ಪ್ಯಾಕೇಜ್ ಘೋಷಿಸಿ, ಸಿಎಂ ಅಧಿಕೃತ ಕಚೇರಿಯಲ್ಲಿ ಶರಣಾದ ನಕ್ಸಲ್ ಕಾರ್ಯಕರ್ತರನ್ನು ವಿಶೇಷ ಗಣ್ಯ ಅತಿಥಿಗಳ ರೀತಿಯಲ್ಲಿ ಬರ ಮಾಡಿಕೊಂಡಿದ್ದನ್ನು ನೆನಪಿಸುತ್ತದೆ. ಪ್ರಭುತ್ವದ ವಿರುದ್ಧ ಹೋರಾಡಬೇಕೆಂದು ರಾಹುಲ್ ಗಾಂಧಿ ಹೇಳುವುದಾದರೆ ಆಯಾ ರಾಜ್ಯದ ಕಾಂಗ್ರೆಸ್ ಸರ್ಕಾರಗಳನ್ನು ವಜಾಗೊಳಿಸಬೇಕಾಗುತ್ತದೆ. ಕಾಂಗ್ರೆಸ್ ನಾಯಕ ಏಕಕಾಲಕ್ಕೆ ಎರಡು ನಿಲುವುಗಳನ್ನು ಪ್ರತಿಪಾದಿಸುವುದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!