ರಣದೀಪ್ ಸಿಂಗ್ ಸುರ್ಜೇವಾಲಾ 
ರಾಜಕೀಯ

ಯಾರಿಗೂ ನೊಟೀಸ್ ನೀಡಿಲ್ಲ, ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ: ಸುರ್ಜೇವಾಲಾ ಸ್ಪಷ್ಟನೆ

ಎಲ್ಲಾ ವದಂತಿಗಳನ್ನು ಯಾರು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾವುದೇ ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಳಗಾವಿ: ಸಾರ್ವಜನಿಕ ವೇದಿಕೆಯಲ್ಲಿ ಪಕ್ಷದ ವಿಷಯದ ಬಗ್ಗೆ ಮಾತನಾಡದಂತೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಯಾರು ಈ ವದಂತಿ ಹಬ್ಬಿಸುತ್ತಿದ್ದಾರೆ' ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಪ್ರಶ್ನಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವ ಸಚಿವರಿಗೂ, ಈ ಎಲ್ಲಾ ವದಂತಿಗಳನ್ನು ಯಾರು ಹರಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಯಾವುದೇ ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದಿದ್ದಾರೆ.

ಈ ವದಂತಿಗಳನ್ನೆಲ್ಲ ಯಾರು ಹಬ್ಬಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ, ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಇಲ್ಲೇಕೆ ಬರುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ವಿಚಾರ ಸೇರಿದಂತೆ, ಸಿಎಂ ಸೀಟಿನ ಬಗ್ಗೆ ಮಾತಾಡುತ್ತಿದ್ದ ಸಚಿವರಿಗೆ ನೋಟಿಸ್ ನೀಡುವ ವದಂತಿಗೆ ತೆರೆ ಎಳೆದಿದ್ದಾರೆ.

ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಮಾತ್ರ ಅಪಮಾನ ಮಾಡಿಲ್ಲ. ಅಂಬೇಡ್ಕರ್ ತತ್ವಗಳನ್ನು ನಂಬುವವರ ಅಪಹಾಸ್ಯ ಮಾಡಿದ್ದಾರೆ. ಇದನ್ನು ವಿರೋಧಿಸಿ ಬೆಳಗಾವಿಯಲ್ಲಿ ಜ.21ರಂದು 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ, ಜ.27ರಂದು ಅಂಬೇಡ್ಕರ್ ಜನ್ಮಸ್ಥಳವಿರುವ ಮಧ್ಯಪ್ರದೇಶದಲ್ಲಿ ಸಮಾವೇಶ ಮಾಡಲಿದ್ದೇವೆ' ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ