ವಿಜಯೇಂದ್ರ- ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜಕೀಯ

ಅಪ್ಪನನ್ನೆ ಜೈಲಿಗೆ ಕಳಿಸಿದ ಮಹಾನ್ ನಾಯಕ: ವಿಜಯೇಂದ್ರ ವಿರುದ್ಧ ಯತ್ನಾಳ್‌ ಮತ್ತೆ ವಾಗ್ದಾಳಿ

ಚೆನ್ನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಜಾರಕಿಹೊಳಿಯನ್ನು ಬಲಿ ಕೊಟ್ಟವರು ಯಾರು? ಇದರಲ್ಲಿ ವಿಜಯೇಂದ್ರರ ಪಾತ್ರವೇನು ಅಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ವಿಜಯಪುರ: ಬಿಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಕಾರಣವೇ ಇಂದಿನ ರಾಜ್ಯಾಧ್ಯಕ್ಷರು. ಧೀಮಂತ ಪೂಜ್ಯ ತಂದೆಯನ್ನು ಜೈಲುಗಿ ಕಳುಹಿಸಿದ ಮಹಾನ್ ನಾಯಕ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಮತ್ತೆ ಬಿವೈ ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಂದು ರಮೇಶ್ ಜಾರಕಿಹೊಳಿ ನಾಲಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ವಿಜಯೇಂದ್ರ ತಾಕೀತು ಮಾಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಯತ್ನಾಳ್, ರಮೇಶ್ ಜಾರಕಿಹೊಳಿ 17 ಶಾಸಕರನ್ನು ಕರೆದುಕೊಂಡು ಬರದಿದ್ದರೆ ಯಡಿಯೂರಪ್ಪ ಸಿಎಂ ಆಗುತ್ತಿದ್ದರಾ? ಯಡಿಯೂರಪ್ಪ ಸಿಎಂ ಆಗಲು ಮುಖ್ಯ ಕಾರಣವೇ ರಮೇಶ್ ಜಾರಕಿಹೊಳಿ. ನೀವು ಇಷ್ಟೆಲ್ಲಾ ದುಡ್ಡು ಮಾಡಲು ಕಾರಣ ರಮೇಶ್ ಜಾರಕಿಹೊಳಿ. ಎಷ್ಟು ದುಡ್ಡು ಮಾಡಿದ್ದೀರಿ ಎಂದು ಜಗತ್ತಿಗೆ ಗೊತ್ತಿದೆ' ಎಂದು ತಿರುಗೇಟು ನೀಡಿದರು.

ಚೆನ್ನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಜಾರಕಿಹೊಳಿಯನ್ನು ಬಲಿ ಕೊಟ್ಟವರು ಯಾರು? ಇದರಲ್ಲಿ ವಿಜಯೇಂದ್ರರ ಪಾತ್ರವೇನು ಅಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

ಯಡಿಯೂರಪ್ಪ ಒಬ್ಬರೇ ಸೈಕಲ್ ತುಳಿದು ಪಕ್ಷ ಕಟ್ಟಿದ್ದಲ್ಲ. ಸೈಕಲ್ ನಾವು ಕೂಡಾ ಹೊಡೆದಿದ್ದೇವೆ. ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿ ಆದರು. ವಿರೋಧ ಪಕ್ಷದ ನಾಯಕನಾಗಿದ್ದಾರೆ, ಸೋತಾಗ ವಿಧಾನ ಪರಿಷತ್ ಸದಸ್ಯ ಮಾಡಲಾಗಿದೆ. ಸಂಸದರನ್ನಾಗಿ ಮಾಡಲಾಗಿದೆ ಎಂದರು.

ರಾಜ್ಯಾಧ್ಯಕ್ಷರಾಗುವ ತನಕ ವಿಜಯೇಂದ್ರ ಪಕ್ಷಕ್ಕಾಗಿ ಏನು ಮಾಡಿಲ್ಲ. ಅವರು ಬರೀ ಕಲೆಕ್ಷನ್ ಮಾಸ್ಟರ್. ವಿಜಯೇಂದ್ರ ತನ್ನ ಅಪ್ಪ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ ಮಹಾನ್ ನಾಯಕ ಎಂದು ಯತ್ನಾಳ್ ಗುಡುಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT