ನಾಝಿಯಾ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಮಹಿಳೆಯರೊಂದಿಗೆ ಸಿಎಂ ಸಿದ್ದರಾಮಯ್ಯ 'ಚುಮ್ಮಾ ಚಾಟಿ' ಮಾಡ್ತಾರೆ! ಬಿಜೆಪಿ ನಾಯಕಿ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್

ಕಳೆದ 54 ವರ್ಷಗಳಿಂದ ಹಿಂದೂಗಳು ನಿದ್ರೆಯಲ್ಲಿದ್ದಾರೆ. ದೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಈಗ ಹಲವಾರು ಹಿಂದೂ ಸಮಾವೇಶಗಳನ್ನು ನಡೆಸಲಾಗುತ್ತಿದೆ. ಮುಸ್ಲಿಂ ಮಹಿಳೆಯರು ತಮ್ಮ ಗಂಡಂದಿರಿಗೆ ತಲಾಖ್ ನೀಡಿ, ಹಿಂದುತ್ವವನ್ನು ಸ್ವೀಕರಿಸಿ, ಮರುಮದುವೆಯಾಗಬೇಕು

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರು, ನಟಿಯರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ನಾಯಕಿ ನಾಝಿಯಾ ಇಲಾಹಿ ಖಾನ್ ಆರೋಪಿಸಿದ್ದಾರೆ.

ಭಾನುವಾರ ಬೆಳಗಾವಿ ಬಳಿಯ ಸುಳೇಭಾವಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ನಾಝಿಯಾ, ಮಹಿಳೆಯರೊಂದಿಗೆ ಅನುಚಿತ ವರ್ತನೆಗಾಗಿ ಮುಖ್ಯಮಂತ್ರಿಯನ್ನು ಟಿವಿ ಚಾನೆಲ್‌ಗಳು ಆಗಾಗ್ಗೆ ಗುರಿಯಾಗಿಸಿಕೊಳ್ಳುತ್ತವೆ ಮತ್ತು ಅವರ ಅನುಚಿತ ವರ್ತನೆಯ ಘಟನೆಗಳ ಪಟ್ಟಿಯನ್ನು ಕೊಡುವುದಾಗಿ ಹೇಳಿದರು.

ನಾಝಿಯಾ ಅವರ ಹೇಳಿಕೆಗಳ ವೀಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

'ನಾನು ಕಳೆದ 32 ವರ್ಷಗಳಿಂದ ಮುಸ್ಲಿಂ ಆಗಿದ್ದರೂ ಕುಂಭ ಮೇಳದಲ್ಲಿ ಪಾಲ್ಗೊಂಡು ಸನಾತನ ಮುಸ್ಲಿಂ' ಆಗಲು ಗಂಗಾನದಿಯಲ್ಲಿ ಸ್ನಾನ ಮಾಡುವುದಾಗಿ ನಾಝಿಯಾ ಹೇಳಿದರು. ಕಳೆದ 54 ವರ್ಷಗಳಿಂದ ಹಿಂದೂಗಳು ನಿದ್ರೆಯಲ್ಲಿದ್ದಾರೆ. ದೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಈಗ ಹಲವಾರು ಹಿಂದೂ ಸಮಾವೇಶಗಳನ್ನು ನಡೆಸಲಾಗುತ್ತಿದೆ. ನೂರಾರು ವರ್ಷಗಳ ತ್ಯಾಗಗಳು ರಾಮ ಮಂದಿರ ನಿರ್ಮಾಣದೊಂದಿಗೆ ಅಂತಿಮವಾಗಿ ಫಲ ನೀಡಿವೆ ಎಂದು ಅವರು ಪ್ರತಿಪಾದಿಸಿದರು.

ಹಸುಗಳ ಹತ್ಯೆ ನಿಲ್ಲಿಸಿ: ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಗೋವುಗಳ ಹತ್ಯೆಯನ್ನು ಕೊನೆಗೊಳಿಸಬೇಕೆಂದು ಅವರು ಕರೆ ನೀಡಿದರು. ವಕ್ಫ್ ಮಂಡಳಿ ಭೂ ಮಾಫಿಯಾ ಎಂದು ಆರೋಪಿಸಿದ ನಾಝಿಯಾ, ಸಂವಿಧಾನದಲ್ಲಿ ವಕ್ಫ್ ಮಂಡಳಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಮುಸ್ಲಿಂ ಮಹಿಳೆಯರು ತಮ್ಮ ಗಂಡಂದಿರಿಗೆ ತಲಾಖ್ ನೀಡಿ, ಹಿಂದುತ್ವವನ್ನು ಸ್ವೀಕರಿಸಿ, ಮರುಮದುವೆಯಾಗುವಂತೆ ಅವರು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT