ನಾಝಿಯಾ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಮಹಿಳೆಯರೊಂದಿಗೆ ಸಿಎಂ ಸಿದ್ದರಾಮಯ್ಯ 'ಚುಮ್ಮಾ ಚಾಟಿ' ಮಾಡ್ತಾರೆ! ಬಿಜೆಪಿ ನಾಯಕಿ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್

ಕಳೆದ 54 ವರ್ಷಗಳಿಂದ ಹಿಂದೂಗಳು ನಿದ್ರೆಯಲ್ಲಿದ್ದಾರೆ. ದೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಈಗ ಹಲವಾರು ಹಿಂದೂ ಸಮಾವೇಶಗಳನ್ನು ನಡೆಸಲಾಗುತ್ತಿದೆ. ಮುಸ್ಲಿಂ ಮಹಿಳೆಯರು ತಮ್ಮ ಗಂಡಂದಿರಿಗೆ ತಲಾಖ್ ನೀಡಿ, ಹಿಂದುತ್ವವನ್ನು ಸ್ವೀಕರಿಸಿ, ಮರುಮದುವೆಯಾಗಬೇಕು

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರು, ನಟಿಯರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಅನೇಕ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಜೆಪಿ ನಾಯಕಿ ನಾಝಿಯಾ ಇಲಾಹಿ ಖಾನ್ ಆರೋಪಿಸಿದ್ದಾರೆ.

ಭಾನುವಾರ ಬೆಳಗಾವಿ ಬಳಿಯ ಸುಳೇಭಾವಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ನಾಝಿಯಾ, ಮಹಿಳೆಯರೊಂದಿಗೆ ಅನುಚಿತ ವರ್ತನೆಗಾಗಿ ಮುಖ್ಯಮಂತ್ರಿಯನ್ನು ಟಿವಿ ಚಾನೆಲ್‌ಗಳು ಆಗಾಗ್ಗೆ ಗುರಿಯಾಗಿಸಿಕೊಳ್ಳುತ್ತವೆ ಮತ್ತು ಅವರ ಅನುಚಿತ ವರ್ತನೆಯ ಘಟನೆಗಳ ಪಟ್ಟಿಯನ್ನು ಕೊಡುವುದಾಗಿ ಹೇಳಿದರು.

ನಾಝಿಯಾ ಅವರ ಹೇಳಿಕೆಗಳ ವೀಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

'ನಾನು ಕಳೆದ 32 ವರ್ಷಗಳಿಂದ ಮುಸ್ಲಿಂ ಆಗಿದ್ದರೂ ಕುಂಭ ಮೇಳದಲ್ಲಿ ಪಾಲ್ಗೊಂಡು ಸನಾತನ ಮುಸ್ಲಿಂ' ಆಗಲು ಗಂಗಾನದಿಯಲ್ಲಿ ಸ್ನಾನ ಮಾಡುವುದಾಗಿ ನಾಝಿಯಾ ಹೇಳಿದರು. ಕಳೆದ 54 ವರ್ಷಗಳಿಂದ ಹಿಂದೂಗಳು ನಿದ್ರೆಯಲ್ಲಿದ್ದಾರೆ. ದೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಈಗ ಹಲವಾರು ಹಿಂದೂ ಸಮಾವೇಶಗಳನ್ನು ನಡೆಸಲಾಗುತ್ತಿದೆ. ನೂರಾರು ವರ್ಷಗಳ ತ್ಯಾಗಗಳು ರಾಮ ಮಂದಿರ ನಿರ್ಮಾಣದೊಂದಿಗೆ ಅಂತಿಮವಾಗಿ ಫಲ ನೀಡಿವೆ ಎಂದು ಅವರು ಪ್ರತಿಪಾದಿಸಿದರು.

ಹಸುಗಳ ಹತ್ಯೆ ನಿಲ್ಲಿಸಿ: ದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಗೋವುಗಳ ಹತ್ಯೆಯನ್ನು ಕೊನೆಗೊಳಿಸಬೇಕೆಂದು ಅವರು ಕರೆ ನೀಡಿದರು. ವಕ್ಫ್ ಮಂಡಳಿ ಭೂ ಮಾಫಿಯಾ ಎಂದು ಆರೋಪಿಸಿದ ನಾಝಿಯಾ, ಸಂವಿಧಾನದಲ್ಲಿ ವಕ್ಫ್ ಮಂಡಳಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಮುಸ್ಲಿಂ ಮಹಿಳೆಯರು ತಮ್ಮ ಗಂಡಂದಿರಿಗೆ ತಲಾಖ್ ನೀಡಿ, ಹಿಂದುತ್ವವನ್ನು ಸ್ವೀಕರಿಸಿ, ಮರುಮದುವೆಯಾಗುವಂತೆ ಅವರು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT