ಎಹೆಚ್ ವಿಶ್ವನಾಥ್ 
ರಾಜಕೀಯ

ಡಿಕೆಶಿ ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: MLC ವಿಶ್ವನಾಥ್

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ, ಬಿಜೆಪಿ ಎಂಎಲ್ ಸಿ ಎ.ಎಚ್.ವಿಶ್ವನಾಥ್ ಅವರು ಬುಧವಾರ ಭವಿಷ್ಯ ನುಡಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಲಾಗುತ್ತಿದೆ. ಇದೆಲ್ಲಾ ಬಾಲಿಶತನ, ಮೂರ್ಖತನ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್‌‍ 136 ಸ್ಥಾನ ಗೆಲ್ಲಲು ಡಿ.ಕೆ.ಶಿವಕುಮಾರ್‌ ಅವರ ಕೊಡುಗೆ ಬಹಳಷ್ಟಿದೆ. ಅವರದು ಸಾಕಷ್ಟು ಖರ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತುಕತೆಯಾಗಿತ್ತು. ಹೀಗಾಗಿ ಮುಂದೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯನವರು ಕಾಂಗ್ರೆಸ್‌‍ ಪಕ್ಷವನ್ನು ಕಟ್ಟಿದವರಲ್ಲ. ಅವರಿಗೆ ಏನು ಆಗಬೇಕೊ ಅದು ಆಗಿ ಆಗಿದೆ. ಕಾಂಗ್ರೆಸ್‌‍ ಪಕ್ಷದ ಘನತೆ ಹಾಗೂ ಖ್ಯಾತಿಯನ್ನು ಕಟ್ಟಿಕೊಂಡು ಅವರಿಗೇನು ಆಗಬೇಕು. ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರ ಹಿಂದೆ ಸಿದ್ದರಾಮಯ್ಯನವರಿರುವುದು ಖಚಿತ. ಮಂತ್ರಿಗಳು ನೆಪಮಾತ್ರ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಮುಡಾ ಪ್ರಕರಣದಲ್ಲಿ ಮರ್ಯಾದೆ ಕಳೆದುಕೊಂಡಿದ್ದಾರೆ. ಮೈಸೂರು ಜನರಿಗೆ ಮನೆ ಕಟ್ಟಿಕೊಳ್ಳಲು ಒಂದು ಸೈಟ್‌ ಕೊಡುವುದಿಲ್ಲ. ಬದಲಾಗಿ ಮುಖ್ಯಮಂತ್ರಿ ಹಾಗೂ ಸಚಿವರು ತಮಷ್ಟಕ್ಕೆ ತಾವೇ ನಿವೇಶನಗಳನ್ನು ಬರೆಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಮೈಸೂರು ವಿಜಯನಗರ ಸಾಮ್ರಾಜ್ಯವಾಗಿದೆ. 1200 ರೂ.ಗೆ 50×80 ಅಡಿ ನಿವೇಶನವನ್ನು ಮಾರಾಟ ಮಾಡಿದ್ದಾರೆ. ವಿಜಯನಗರದ ಸಾಮ್ರಾಜ್ಯದ ಕಾಲದಲ್ಲಿ ಚಿನ್ನ, ಬೆಳ್ಳಿಯನ್ನು ಮಾರಾಟ ಮಾಡುತ್ತಿದ್ದರು. ಈಗ ನಿವೇಶನಗಳ ಮಾರಾಟವಾಗುತ್ತಿದೆ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT