ಸಚಿವ ರಾಜಣ್ಣ 
ರಾಜಕೀಯ

ಶ್ರೀರಾಮುಲು ಕಾಂಗ್ರೆಸ್​ಗೆ ಬಂದರೆ ಸ್ವಾಗತ: ಸಚಿವ ರಾಜಣ್ಣ

2011 ರಲ್ಲಿ ತಮ್ಮದೇ ಪಕ್ಷವನ್ನು (ಬಿಎಸ್ಆರ್ ಕಾಂಗ್ರೆಸ್) ಎದುರು ಹಾಕಿಕೊಳ್ಳುವ ಮೂಲಕ, 2013 ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು 4 ಸ್ಥಾನಗಳಲ್ಲಿ ಗೆದ್ದಿದ್ದರು.

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಶ್ರೀರಾಮುಲು ನಮ್ಮ ಸಮುದಾಯದ (ಎಸ್‌ಟಿ ನಾಯಕ) ಪ್ರಬಲ ನಾಯಕ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಭಾವಿ ನಾಯಕ. ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದು ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011 ರಲ್ಲಿ ತಮ್ಮದೇ ಪಕ್ಷವನ್ನು (ಬಿಎಸ್ಆರ್ ಕಾಂಗ್ರೆಸ್) ಎದುರು ಹಾಕಿಕೊಳ್ಳುವ ಮೂಲಕ, 2013 ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು 4 ಸ್ಥಾನಗಳಲ್ಲಿ ಗೆದ್ದಿದ್ದರು. ಅವರು ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಬಯಸಿದರೆ ನಾನು ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ನಡುವೆ ವೈಮನಸ್ಸು ಬಂದಿದೆ. ಶ್ರೀರಾಮುಲು ಒಬ್ಬ ಪವರ್ ಫುಲ್ ನಾಯಕ, ಅವರು ನಮ್ಮ ಸಮಾಜದಲ್ಲಿ ಒಳ್ಳೆ ಹೆಸರು ಮಾಡಿದ್ದಾರೆ. ಬಿಎಸ್​ಆರ್ ಪಾರ್ಟಿ ಕಟ್ಟಿ 4 ಸ್ಥಾನ ಪಡೆದವರು. ಎಲ್ಲಾ ಸಮುದಾಯದವರು ಇಷ್ಟ ಪಡುತ್ತಾರೆ, ಸಂಭಾವಿತ ಮನುಷ್ಯ ಕೂಡ. ಅವರಿಗೆ ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಕಾಂಗ್ರೆಸ್​ಗೆ ಬಂದರೆ ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, 2024ರ ಲೋಕಸಭೆ ಚುನಾವಣೆಯಿಂದಲೂ ಶ್ರೀರಾಮುಲು ಕಾಂಗ್ರೆಸ್ ಸೇರಲು ಪ್ರಯತ್ನಿಸುತ್ತಿದ್ದಾರೆ. ಅದು ಕಾರ್ಯರೂಪಕ್ಕೆ ಬರಲಿಲ್ಲ. ಈಗ, ಅವರು (ಹೈಕಮಾಂಡ್‌ನಿಂದ) ಒತ್ತಡದಿಂದಾಗಿ ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಅಂತಿಮ ನಿರ್ಧಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೆಗೆದುಕೊಳ್ಳಲಿದ್ದಾರೆಂದು ಹೇಳಿದರು.

ಇದೇ ವೇಳೆ ಶ್ರೀರಾಮುಲು ಕಾಂಗ್ರೆಸ್ ಸೇರುವುದರಿಂದ ಎಸ್‌ಟಿ ನಾಯಕರಾದ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT