ಸಚಿವ ಪ್ರಿಯಾಂಕ್ ಖರ್ಗೆ 
ರಾಜಕೀಯ

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ: BJP, ಮನುಸ್ಮೃತಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಅಶ್ಲೀಲವಾಗಿ ಮಾತನಾಡುವವರು ಹುಚ್ಚಾಸ್ಪತ್ರೆಯಲ್ಲಿರಬೇಕು. ಆದರೆ, ಅಂತಹವರನ್ನು ಬಿಜೆಪಿ ಮೇಲ್ಮನೆಯಲ್ಲಿ ಕೂರಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಎಂಎಸ್'ಸಿ ರವಿಕುಮಾರ್ ಅವರು ನೀಡಿರುವ ಅಸಭ್ಯ ಹೇಳಿಕೆ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಭ್ಯ, ಅಶ್ಲೀಲವಾಗಿ ಮಾತನಾಡುವವರು ಹುಚ್ಚಾಸ್ಪತ್ರೆಯಲ್ಲಿರಬೇಕು. ಆದರೆ, ಅಂತಹವರನ್ನು ಬಿಜೆಪಿ ಮೇಲ್ಮನೆಯಲ್ಲಿ ಕೂರಿಸಿದೆ. ಮೇಲ್ಮನೆಯಲ್ಲಿ ಯಾರಿದ್ದಾರೆ ನೀವೇ ನೋಡಿ ಸ್ವಾಮಿ, ಎಂಎಲ್‌ಸಿ ರವಿಕುಮಾರ್ ಮೂಲತಃ ಬಿಜೆಪಿಯವರಲ್ಲ. ಆರ್‌ಸ್ಸೆಸ್ ಶಾಖೆಯಿಂದ ಬಂದವರು, ಅವರು ಮನುಸ್ಮೃತಿ ಹಿನ್ನಲೆಯಿಂದ ಬಂದವರು. ಮನುಸ್ಮೃತಿಯಲ್ಲಿ ಮಹಿಳೆಯರ ಬಗ್ಗೆ ಎನು ಗೌರವ ಇದೆ ಅಂತ ಎಲ್ಲರಿಗೂ ಗೊತ್ತು. ಕೊಳಕು ಬುದ್ಧಿ ರವಿಕುಮಾರ್‌ನಲ್ಲಿದೆ, ರವಿಕುಮಾರ್ ನಿಮ್ಹಾನ್ಸ್ ನಲ್ಲಿರಬೇಕು ಎಂದು ವಾಗ್ದಾಳಿ ನಡೆಸಿದರು.

ತಾವು ಹಾಗೇ ಮಾತೇ ಆಡಿಲ್ಲ, ಅಶ್ಲೀಲ ಮತನಾಡಿದ್ದರೆ ನೇಣು ಹಾಕಿಕೊಳ್ಳುತ್ತೇನೆಂಬ ರವಿಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಹಾಗಿದ್ದರೆ ನೇಣು ಹಾಕಿಕೊಳ್ಳಲು ಹಗ್ಗ ಕೊಡಿ ಅವರಿಗೆ, ಇವರಿಗೆ ಇದಕ್ಕಿಂದ ಸಾಕ್ಷಿ ಬೇಕಾ ವಿಡಿಯೋದಲ್ಲೆ ಎಲ್ಲಾ ಇದೆ, ರವಿಕುಮಾರ್‌ಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

ರವಿಕುಮಾರ್ ಅವರಿಗೆ ಮಾನಸಿಕ‌‌ ಚಿಕಿತ್ಸೆ ಅಗತ್ಯವಿದೆ, ಬಿಜೆಪಿಯವರು ಕೇಳುವ ಕ್ಷಮೆಯು ಪಶ್ಚಾತಾಪದ ಕ್ಷಮೆಯಲ್ಲ, ಪಲಾಯನವಾದದ ಕ್ಷಮೆ, ಮಹಿಳಾ ಅಧಿಕಾರಿಗಳನ್ನು ನಿಂದಿಸುವುದು ರವಿಕುಮಾರ್ ಗೆ ಚಟವಾದ ಹಿನ್ನೆಲೆ ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂದರು.

ಮಾಡಿದ ತಪ್ಪನ್ನೇ ಪದೇ ಪದೇ ಮಾಡುವುದು, ಮತ್ತೆ ಮತ್ತೆ ಕ್ಷಮೆ ಕೇಳುವುದು ಬಿಜೆಪಿಯವರಿಗೆ ಸಾವರ್ಕರ್ ರಿಂದ ಬಂದ ರಕ್ತಗತ ಗುಣ ಇರಬಹುದು, ಮಹಿಳಾ ಅಧಿಕಾರಿಗಳನ್ನೇ ಈ ಪರಿ ನಿಂದಿಸಿದರೆ, ಸಾಮಾನ್ಯ ಮಹಿಳೆಯರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳಬಹುದು? ಇದನ್ನು ಜನರೇ ತೀರ್ಮಾನಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT