ಪ್ರಿಯಾಂಕ್ ಖರ್ಗೆ online desk
ರಾಜಕೀಯ

ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಕೇಸು ಹಾಕ್ತೀರಾ?: ಪ್ರಿಯಾಂಕ್ ಖರ್ಗೆಗೆ BJP ಪ್ರಶ್ನೆ

ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಭಾನುವಾರ ಪ್ರಶ್ನೆ ಮಾಡಿದೆ.

ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿರುವ ಬಿಜೆಪಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಕಿಡಿಕಾರಿದ್ದಾರೆ.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ.ಹಾರ್ಟ್ ಅಟ್ಯಾಕ್ ಗಳಿಗೆ ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ?

ಬೇಕಾದರೆ ನಿಮ್ಮ ಚೀಫ್ @zoo_bear ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ಕೇಸು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT