ರಣದೀಪ್ ಸಿಂಗ್ ಸುರ್ಜೆವಾಲಾ 
ರಾಜಕೀಯ

ಶಾಸಕರ ಸಮಸ್ಯೆ ಇತ್ಯರ್ಥವಾಗಲಿದೆ ಆದರೆ, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್'ಗೆ ಬಿಟ್ಟದ್ದು: ಸುರ್ಜೆವಾಲಾ

ಶಾಸಕರಿಗೆ ಹಲವು ಆಸೆಗಳು ಇರಬಹುದು. ಪತ್ರಕರ್ತರಿಗೆ ಸಂಪಾದಕರಾಗುವ ಆಸೆ ಇರುತ್ತದೆಯಲ್ಲವೇ? ಆದರೆ, ತೀರ್ಮಾನ ಮಾಡುವವರು ಸಂಸ್ಥೆ ಮಾಲೀಕರು. ಇಲ್ಲೂ ಹಾಗೆಯೇ, ಪಕ್ಷದಲ್ಲಿ ಹೈಕಮಾಂಡ್‌ ಇದೆ.

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಹೆಚ್ಚಾಗಿದ್ದು, ಈ ನಡುವಲ್ಲೇ ಊಹಾಪೋಹಗಳಿಗೆ ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸ್ಪಶಷ್ಟನೆ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಹಲವು ಆಸೆಗಳು ಇರಬಹುದು. ಪತ್ರಕರ್ತರಿಗೆ ಸಂಪಾದಕರಾಗುವ ಆಸೆ ಇರುತ್ತದೆಯಲ್ಲವೇ? ಆದರೆ, ತೀರ್ಮಾನ ಮಾಡುವವರು ಸಂಸ್ಥೆ ಮಾಲೀಕರು. ಇಲ್ಲೂ ಹಾಗೆಯೇ, ಪಕ್ಷದಲ್ಲಿ ಹೈಕಮಾಂಡ್‌ ಇದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಗೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಇಬ್ಬರೂ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ತಾರತಮ್ಯ ಮಾಡದಂತೆ ಮನವೊಲಿಸಲು ಅವರು ಆಗಾಗ್ಗೆ ದೆಹಲಿಗೆ ಭೇಟಿ ನೀಡುತ್ತಾರೆ. ಇಬ್ಬರೂ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರಗಳಲ್ಲಿಅಭಿವೃದ್ಧಿ ಕೆಲಸ ಹೇಗಿದೆ? ಗ್ಯಾರಂಟಿ ಯೋಜನೆಗಳ ಪರಿಣಾಮ ಇತ್ಯಾದಿ ಬಗ್ಗೆ ನಿರ್ದಿಷ್ಟ ಪ್ರಶ್ನೆಗಳಿಗೆ ಶಾಸಕರಿಂದ ಉತ್ತರ ಪಡೆಯುತ್ತಿದ್ದೇವೆ. ಶಾಸಕರಾಗಿ ಜವಾಬ್ದಾರಿ ನಿರ್ವಹಿಸುವಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದಕ್ಕೆ ಏನು ಪರಿಹಾರ ಹುಡುಕಬೇಕು ಎಂಬ ಚಿಂತನೆ ನಡೆಯಲಿದೆ. ಶಾಸಕರು ಸಾಕಷ್ಟು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದು, ಲಿಖಿತ ರೂಪದಲ್ಲಿ ಮಾಹಿತಿ ತೆಗೆದುಕೊಳ್ಳುತ್ತಿದ್ದೇವೆ ಎಂದರು,

ಇದೇ ವೇಳೆ ಕೇಂದ್ರ ಸರ್ಕಾರದ ತೊಗರಿ ಬೇಳೆಯ ಉಚಿತ ಸುಂಕ ಆಮದು ನೀತಿಯನ್ನು ಸುರ್ಜೇವಾಲಾ ಅವರು ಟೀಕಿಸಿದರು.

ಮೋದಿ ಸರ್ಕಾರ ರಾಜ್ಯ ರೈತರನ್ನು ದಮನ ಮಾಡುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ದೇಶದ ಶೇ.50 ತೊಗರಿ ಬೇಳೆ ಬೆಳೆಯುತ್ತವೆ. ಬೆಲೆ ಕುಸಿತ ಹಿನ್ನೆಲೆ ರಾಜ್ಯ ಸರ್ಕಾರ ತೊಗರಿ ಬೇಳೆಗೆ 16,548 ರೂ. ನಂತೆ ಪ್ರತಿ ಕ್ವಿಂಟಾಲ್ ಗೆ ದರ ನಿಗದಿಗೆ ಬೇಡಿಕೆ ಇಟ್ಟಿದೆ. ಆದರೆ, ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್ ಗೆ ಕೇವಲ 8,000 ದರ ನಿಗದಿ ಮಾಡಿದೆ. ಸದ್ಯ ರಾಜ್ಯ ರೈತರು ಬೆಲೆ ಕುಸಿತದಿಂದ ತೊಗರಿ ಬೇಳೆಯನ್ನು ಪ್ರತಿ ಕ್ವಿಂಟಾಲ್ ಗೆ ರೂ.5500-ರೂ.6000 ರಂತೆ ಮಾರಾಟ ಮಾಡಬೇಕಾಗಿದೆ ಎಂದರು.

ರಾಜ್ಯದ ರೈತರು 10 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಬೆಳೆಯುತ್ತಿದ್ದಾರೆ. ಬೆಲೆ ಕುಸಿತ ಹಾಗೂ ಈ ಬೆಂಬಲ ಬೆಲೆ ಕೊಡದೇ ಇರುವ ಕಾರಣ ರಾಜ್ಯದ ರೈತರಿಗೆ 1,550 ಕೋಟಿ ರೂ‌. ನಷ್ಟವಾಗುತ್ತಿದೆ. ಮೋದಿ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯದ ರೈತರಿಗೆ ತಾರತಮ್ಯ ಮಾಡುತ್ತಿದೆ. ಮೋದಿ ಸರ್ಕಾರ ಮೊಸಾಂಬಿಕ್, ಮ್ಯಾನ್ಮಾರ್, ಆಸ್ಟ್ರೇಲಿಯಾದ ರೈತರನ್ನು ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದರು. ಅಲ್ಲದೆ, ಕೇಂದ್ರ ಸರ್ಕಾರ ತೊಗರಿ ಬೇಳೆ ಆಮದನ್ನು ತೆರಿಗೆ ಮುಕ್ತ ಮಾಡಿದೆ. ಮಾರ್ಚ್ 2026ರ ವರೆಗೆ ಆಮದು ತೆರಿಗೆ ಮುಕ್ತ ಮಾಡಿದೆ. ನಿಮಗೆ ದೇಶದ ರೈತರ ಅಗತ್ಯ ಇಲ್ಲ. ವಿದೇಶಿ ರೈತರ ಅಗತ್ಯ ಇದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರ ಮೊಸಾಂಬಿಕ್ ದೇಶದ ಜೊತೆ ಎಂಒಯು ಮಾಡಿಕೊಂಡಿದೆ. ಇದೊಂದು ಆರ್ಥಿಕ ದಮನ ನೀತಿಯಾಗಿದೆ. ಎಂಎಸ್ ಪಿ ಕೊಡದ ಕಾರಣ ರಾಜ್ಯದ ರೈತರಿಗೆ ಸುಮಾರು 1,500 ಕೋಟಿ ರೂ. ನಷ್ಟ ಆಗುತ್ತಿದೆ. ಕೇಂದ್ರದ ಸಚಿವರಾದ ವಿ. ಸೋಮಣ್ಣ, ಪ್ರಲ್ಹಾದ್ ಜೋಶಿ, ಹೆಚ್ ಡಿ ಕುಮಾರಸ್ವಾಮಿ ಏನು ಮಾಡುತ್ತಿದ್ದೀರಿ. ರೈತರಿಗೆ ತಾರತಮ್ಯ ಆಗುತ್ತಿರುವಾಗ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರ ಜೆಡಿಎಸ್​ ಪಕ್ಷ ಹೇಗೆ ಕೇಂದ್ರ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಕೇಂದ್ರ ಸಚಿವರು ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.

ಈ ನಡುವೆ ಶಾಸಕರೊಂದಿಗೆ 2ನೇ ಸುತ್ತಿನ ಸಭೆ ನಡೆಸಿದ ಸುರ್ಜೇವಾಲಾ ಅವರು, ಬಳ್ಳಾರಿ ರಾಜಕೀಯಕ್ಕೆ ಸಂಬಂಧಿಸಿದಂತೆ ಹಲವಾರು ಸುತ್ತಿನ ಮಾತುಕತೆಗಳನ್ನು ನಡೆಸಿದರು.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ವಿಜಯನಗರ ಶಾಸಕ ಎಚ್. ಆರ್. ಗವಿಯಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆಂದು ತಿಳಿದುಬಂದಿದೆ. ಸುರ್ಜೆವಾಲಾ ಎರಡು ಬಾರಿ ಗವಿಯಪ್ಪ ಅವರನ್ನು ಭೇಟಿಯಾಗಿದ್ದು, ಸ್ಪಷ್ಟೀಕರಣಕ್ಕಾಗಿ ನಾಗೇಂದ್ರ ಅವರನ್ನು ಕರೆದಿದ್ದರು ಎಂದು ಮೂಲಗಳು ತಿಳಿಸಿವೆ. ಸುರ್ಜೇವಾಲಾ ಭೇಟಿ ಬಳಿಕ ಪ್ರತಿಕ್ರಿಯಿಸಿದ ನಾಗೇಂದ್ರ ಅವರು, ದಾಖಲೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಸೋಮವಾರ ಸುರ್ಜೆವಾಲಾ ಅವರನ್ನು ಭೇಟಿಯಾದ ನಾಗೇಂದ್ರ ಅವರು, ದಾಖಲೆಗಳನ್ನು ಸಲ್ಲಿಸಿ, ಸಚಿವ ಸ್ಥಾನಕ್ಕೆ ಮರು ಸೇರ್ಪಡೆಗೆ ಒತ್ತಾಯಿಸಿದರು ಎಂದು ತಿಳಿದುಬಂದಿದೆ. ನವೆಂಬರ್‌ನಲ್ಲಿ ಸಂಪುಟ ಪುನರ್ರಚನೆಯಾಗುವ ನಿರೀಕ್ಷೆಯಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT