ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್  ಸಾಂದರ್ಭಿಕ ಚಿತ್ರ
ರಾಜಕೀಯ

ಡ್ರಾಮಾ ನಡೆಯುತ್ತಿದೆ, ನನಗೆ ನಾಟಕ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ: ಡಾ. ಜಿ.ಪರಮೇಶ್ವರ್; Video

ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹಗಳ ನಡುವೆ ಅಂತಹ ಸಂದರ್ಭ ಬಂದಾಗ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ವಿಶ್ಲೇಷಣೆ ಮಾಡಿದಂತೆ ಇದೊಂದು ಡ್ರಾಮಾ. ನಿಮ್ಮ ಹೇಳಿಕೆಯನ್ನು ನಾನು ಒಪ್ಪಬೇಕಾಗುತ್ತೆ. ಪದೇ ಪದೇ ಇದರ ಬಗ್ಗೆ ಚರ್ಚೆ ಆಗುವುದು, ಅವರೊಂದು ಹೇಳಿಕೆ ಕೊಡುವುದು ನಾನೊಂದು ಹೇಳೋದು, ಮತ್ತೊಬ್ಬರು ಒಂದು ಹೇಳೋದು ಆಗಬಾರದು ಎಂದರು.

ಆಡಳಿತದಲ್ಲಿ ಯಾವುದೇ ರೀತಿ ತೊಂದರೆ ಇಲ್ಲ. ಮುಖ್ಯಮಂತ್ರಿಗಳು ಉತ್ತಮ ಆಡಳಿತ ಮಾಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ ಎಂದು ಹೇಳಿದರು.

ನಾನು ಸ್ಮೂತ್ ಆಗೇ ಇರೋದು, ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟ ಇಲ್ಲ. ಅದನ್ನ ಬಿಟ್ಟುಬಿಡೋಣ, ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಾರೆ. ಸಂದರ್ಭ ಬಂದಾಗ ತೀರ್ಮಾನ ಮಾಡುತ್ತಾರೆ ಎಂದು ಪರಮೇಶ್ವರ್ ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!

ಸದನದಲ್ಲಿ 'CM ಕುರ್ಚಿ ಕಿತ್ತಾಟ' ಪ್ರತಿಧ್ವನಿ: ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM ಡಿ.ಕೆ.ಶಿವಕುಮಾರ್!

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ; ಸಂಸತ್ ನಲ್ಲಿ ಕೋಲಾಹಲ; Video

ಸೋನಮ್ ವಾಂಗ್ಚುಕ್ ಲಡಾಖ್ ನ್ನು ನೇಪಾಳವನ್ನಾಗಿಸಲು ಬಯಸುತ್ತಿದ್ದಾರೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡ್ತಾರೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘದಿಂದ ದೂರು

SCROLL FOR NEXT