ಡಾ. ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಯತೀಂದ್ರ ಸಿದ್ದರಾಮಯ್ಯ

ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು: 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಯಾರ್ರೀ ಹೇಳಿದ್ದು ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಎಂದು ಕೆಂಡಾಮಂಡಲರಾದರು. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಆ ಕಮಿಟಿಯಲ್ಲಿದ್ದಾರೆ. ಹಾಗಾಗಿ ಅಲ್ಲಿ ಸದಸ್ಯರಾಗಿರುತ್ತಾರೆ. ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧ ಕಲ್ಪಿಸುವ ಅಗತ್ಯ ಇಲ್ಲ ಎಂದು ಕುಟುಕಿದ್ದಾರೆ.

ಭಾಗ್ಯಗಳಿಂದ ಜನ ಸೋಮಾರಿ ಆಗುತ್ತಿದ್ದಾರೆ ಅನ್ನೋ ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಇದನ್ನ ಈಗಲ್ಲ, ಕಳೆದಬಾರಿ ಭಾಗ್ಯಗಳನ್ನ ಕೊಟ್ಟಾಗಲೂ ಹೀಗೆ ಹೇಳ್ತಿದ್ರು. ಯಾರೂ ಸೋಮಾರಿಗಳಾಗಲ್ಲ, ಬಡವರು ಹೊಟ್ಟೆ ತುಂಬಾ ಊಟ ಮಾಡಿ ಸೋಮಾರಿ ಆಗೋದಿಲ್ಲ. ಇದೇ ಪ್ರಶ್ನೆಯನ್ನ ಶ್ರೀಮಂತರ ಸಾಲ ಮನ್ನ ಮಾಡುವ ಕೇಂದ್ರ ಸರ್ಕಾರಕ್ಕೆ ಕೇಳಲಿ. ಆವಾಗ ಕೇಳದ ಇವರಿಗೆ ಬಡವರಿಗೆ ಕೊಟ್ಟಾಗೆ ಯಾಕೆ ಕಣ್ಣುರಿ? ಯಾರು ಏನೇ ಟೀಕೆ ಮಾಡಿದ್ರೂ ನಾವು ಕೊಟ್ಟೇ ಕೊಡ್ತೀವಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬೆಳಗಾವಿಯಲ್ಲಿ ಎಂಇಎಸ್, ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ; ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಬಂದ್!

ತಾಪಮಾನದಲ್ಲಿ ಮತ್ತಷ್ಟು ಕುಸಿತ: ಬೆಂಗಳೂರಿನಲ್ಲಿ ಚಳಿ ಪ್ರಮಾಣ ಹೆಚ್ಚಳ, ವಾಯು ಗುಣಮಟ್ಟದಲ್ಲೂ ಬದಲಾವಣೆ

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!

SCROLL FOR NEXT