ಡಾ. ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಯತೀಂದ್ರ ಸಿದ್ದರಾಮಯ್ಯ

ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು: 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಯಾರ್ರೀ ಹೇಳಿದ್ದು ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಎಂದು ಕೆಂಡಾಮಂಡಲರಾದರು. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಆ ಕಮಿಟಿಯಲ್ಲಿದ್ದಾರೆ. ಹಾಗಾಗಿ ಅಲ್ಲಿ ಸದಸ್ಯರಾಗಿರುತ್ತಾರೆ. ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧ ಕಲ್ಪಿಸುವ ಅಗತ್ಯ ಇಲ್ಲ ಎಂದು ಕುಟುಕಿದ್ದಾರೆ.

ಭಾಗ್ಯಗಳಿಂದ ಜನ ಸೋಮಾರಿ ಆಗುತ್ತಿದ್ದಾರೆ ಅನ್ನೋ ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಇದನ್ನ ಈಗಲ್ಲ, ಕಳೆದಬಾರಿ ಭಾಗ್ಯಗಳನ್ನ ಕೊಟ್ಟಾಗಲೂ ಹೀಗೆ ಹೇಳ್ತಿದ್ರು. ಯಾರೂ ಸೋಮಾರಿಗಳಾಗಲ್ಲ, ಬಡವರು ಹೊಟ್ಟೆ ತುಂಬಾ ಊಟ ಮಾಡಿ ಸೋಮಾರಿ ಆಗೋದಿಲ್ಲ. ಇದೇ ಪ್ರಶ್ನೆಯನ್ನ ಶ್ರೀಮಂತರ ಸಾಲ ಮನ್ನ ಮಾಡುವ ಕೇಂದ್ರ ಸರ್ಕಾರಕ್ಕೆ ಕೇಳಲಿ. ಆವಾಗ ಕೇಳದ ಇವರಿಗೆ ಬಡವರಿಗೆ ಕೊಟ್ಟಾಗೆ ಯಾಕೆ ಕಣ್ಣುರಿ? ಯಾರು ಏನೇ ಟೀಕೆ ಮಾಡಿದ್ರೂ ನಾವು ಕೊಟ್ಟೇ ಕೊಡ್ತೀವಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಗೃಹ ಸಚಿವ ಖರ್ಗೆ ಖಡಕ್ ಸೂಚನೆ; ಇಲ್ಲಿದೆ ಕಾರಣ

INDIA ಮೈತ್ರಿಕೂಟದಲ್ಲಿ ಗದ್ದಲ: DMK, AAP ಗೈರು ಹಿನ್ನಲೆ ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ವ್ಯಾಪಕ ಆಕ್ರೋಶ!

ಡಿಕೆಶಿ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ; ಖಾತೆ ಬಗ್ಗೆ ಕ್ಯಾತೆ ತೆಗೆದಿದ್ದ ರಾಮಲಿಂಗಾರೆಡ್ಡಿಗೆ ಬಂಪರ್!

Cricket: ರೂಂ ಹೊರಗೆ ಗನ್ ಹಿಡಿದು ನಿಂತಿದ್ದರು, ಅಲ್ಲೇ ಆಡಿದ್ದೀವಿ.. ಭಾರತದಲ್ಲಿ ಆಡಲು ಏನು ಸಮಸ್ಯೆ?: ಪಾಕ್ ಮಾನ ಕಳೆದ ಬಾಂಗ್ಲಾ ನಾಯಕ Litton Das

'Veg biryani' ವಿರುದ್ಧ ಬೀದಿಗಿಳಿದ ಸಾಧು-ಸಂತರು; ಹರಿದ್ವಾರದಲ್ಲಿ ಆಗ್ತಿರೋದೇನು?

SCROLL FOR NEXT