ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

ಅಧಿಕಾರ ಹಂಚಿಕೆ ಇಲ್ಲವೆಂದು ಸಿಎಂ ಸ್ಪಷ್ಟನೆ: ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಿ- ಸಚಿವ ಸತೀಶ್ ಜಾರಕಿಹೊಳಿ

ಅಧಿಕಾರ ಹಂಚಿಕೆ ಇಲ್ಲ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಬಲವಾದ ಸಂದೇಶ ರವಾನಿಸಿದ್ದಾರೆ. ಹೀಗಾಗಿ, ಇಂದಿನಿಂದ, ಅಂತಹ ಯಾವುದೇ ಬದಲಾವಣೆಯ ಬಗ್ಗೆ ಎಲ್ಲಾ ಚರ್ಚೆಗಳು ಕೊನೆಗೊಳ್ಳಬೇಕು.

ಬೆಂಗಳೂರು: ಅಧಿಕಾರ ಹಂಚಿಕೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ರಾಜ್ಯದ ಕಾಂಗ್ರೆಸ್‍ನಲ್ಲಿ ನಾಯಕತ್ವ, ಸಿಎಂ ಬದಲಾವಣೆ ವಿಚಾರಕ್ಕೆ ಇತಿಶ್ರೀ ಹಾಡಬೇಕೆಂದು ಸಚಿವ ಸತೀಶ್ ಜಾರಕಿಹೊಳಿಯವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಇಲ್ಲ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಬಲವಾದ ಸಂದೇಶ ರವಾನಿಸಿದ್ದಾರೆ. ಹೀಗಾಗಿ, ಇಂದಿನಿಂದ, ಅಂತಹ ಯಾವುದೇ ಬದಲಾವಣೆಯ ಬಗ್ಗೆ ಎಲ್ಲಾ ಚರ್ಚೆಗಳು ಕೊನೆಗೊಳ್ಳಬೇಕು ಎಂದು ಹೇಳಿದರು.

ಗುರುವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಯಾವುದೇ ಕಾಂಗ್ರೆಸ್ ಶಾಸಕರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ, ಪಕ್ಷದ ಯಾವುದೇ ಶಾಸಕರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಒತ್ತಾಯಿಸಿಲ್ಲ ಎಂದು ಇದೇ ವೇಳೆ ಹೇಳಿದ ಅವರು, 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರವೂ ಸಿಎಂ ಆಯ್ಕೆ ಪ್ರಕ್ರಿಯೆಯ ಸಮಯದಲ್ಲಿಯೂ ಮತದಾನ ನಡೆದಿತ್ತು. ಹೆಚ್ಚಿನ ಮತಗಳನ್ನು ಪಡೆದ ನಂತರ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಸ್ವಾಭಾವಿಕವಾಗಿ, ಸಿದ್ದರಾಮಯ್ಯ ಅವರಿಗೆ ಬಹುಪಾಲು ಶಾಸಕರ ಬೆಂಬಲವಿದೆ. ಅದಕ್ಕಾಗಿಯೇ ಅವರ ಇಂದಿನ ಹೇಳಿಕೆ ಸ್ಪಷ್ಟ ಮತ್ತು ಬಲವಾದ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದರು.

ಕೆಲವು ಶಾಸಕರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ್ದರೆ, ಅದು ಅಭಿವೃದ್ಧಿ ಅನುದಾನಗಳ ಬಗ್ಗೆ ಆಗಿರಬಹುದು... ಕೇವಲ ಶೇ.10ರಷ್ಟು ಮಂದಿ ನಾಯಕತ್ವದ ಬದಲಾವಣೆ ಬಗ್ಗೆ ಮಾತಾಡಿರಬಹುದು. ಆದರೆ, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸವುವುದು ಅಗತ್ಯವಾಗಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇರುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ಪುನರುಚ್ಚರಿಸಿದರು.

ಸಿದ್ದರಾಮಯ್ಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಚರ್ಚೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಅವರ ಅನುಭವ ಪಡೆಯಲು ಓಬಿಸಿ ಸಲಹಾ ಮಂಡಳಿಗೆ ಸದಸ್ಯರನ್ನಾಗಿ ಮಾಡಿದ್ದಾರೆ. ಸಿದ್ದರಾಮಯ್ಯಗೆ ರಾಷ್ಟ್ರೀಯ ಮಟ್ಟದ ಸಾಮರ್ಥ್ಯ ಇದೆ. ಆದರೆ, ಅದನ್ನು ಬಳಸಿಕೊಳ್ಳಲು ಅವಕಾಶ, ಸನ್ನಿವೇಶ ಬಂದಾಗ ಹೋಗಬಹುದು, ಈಗ ಅಂತಹ ಸಂದರ್ಭ ಬಂದಿಲ್ಲ ಎಂದಷ್ಟೇ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT