ಪ್ರದೀಪ್ ಈಶ್ವರ್ 
ರಾಜಕೀಯ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: 2029ರಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮೇಲಿನ ಇಡಿ ರೇಡ್ ಸಂಬಂಧ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸುಬ್ಬಾರೆಡ್ಡಿ ಸಾಹೇಬ್ರು ಕಷ್ಟಪಟ್ಟು ಮೇಲೆ ಬಂದವರು, ಪಕ್ಷ ಕಟ್ಟಿ ಬೆಳೆದವರು. ಅಂತಹವರ ಮೇಲೆ ಇಡಿ ರೇಡ್ ಮಾಡಿದ್ದಾರೆ. ಇಡಿಯವರಿಗೆ ಕಾಂಗ್ರೆಸ್ ಕಂಡರೆ ಯಾಕೋ ಪ್ರೀತಿ ಹೆಚ್ಚು ಅನಿಸುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಅಮಿತ್ ಶಾ ಅವರ ಮಗ ಜಯ್ ಶಾ ಅವರ ಕಂಪನಿ ವ್ಯವಹಾರಗಳು ಮತ್ತು ನಿತಿನ್ ಗಡ್ಕರಿ ಅವರ 17 ಶುಗರ್ ಫ್ಯಾಕ್ಟರಿಗಳ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಇವೆಲ್ಲವೂ ಇಡಿ ಮತ್ತು ಐಟಿಗೆ ಕಾಣುವುದಿಲ್ಲವೇ? ಎಂದು ಸವಾಲು ಹಾಕಿದ್ದಾರೆ.

2029ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಬಿಜೆಪಿಯವರನ್ನು ಹುಡುಕಿ ಹುಡುಕಿ ತಿಹಾರ್ ಜೈಲಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ನೀವು ಎಷ್ಟು ಟಾರ್ಗೆಟ್ ಮಾಡಿದರೂ ನಾವು ಹೆದರುವುದಿಲ್ಲ. ಬರೀ ಕಾಂಗ್ರೆಸ್‌ನ್ನೇ ಟಾರ್ಗೆಟ್ ಮಾಡಿದರೆ ರಾಜಕೀಯ ಎಲ್ಲಿಗೆ ಹೋಗುತ್ತದೆ? ಅವರು ಕಲ್ಲು ಹಾಕಿದರೆ ನಾವು ಫ್ಲವರ್ ಹಾಕುತ್ತೇವೆಯೇ? 2029ಕ್ಕೆ ನಾವು ಕೇಂದ್ರದಲ್ಲಿ ಬಂದರೆ ಬಿಜೆಪಿಯವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಪ್ರದೀಪ್ ಈಶ್ವರ್ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್