ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರಧಾನಿ ಮೋದಿಯನ್ನು ಇದೇ ವರ್ಷ RSS 'ಮಾರ್ಗದರ್ಶಕ ಮಂಡಳಿ'ಗೆ ಕಳುಹಿಸುತ್ತಾರಾ?: ಪ್ರಿಯಾಂಕ್ ಖರ್ಗೆ

ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ.

ಬೆಂಗಳೂರು: ಬಿಜೆಪಿಯ ಮಾತೃ ಸಂಘಟನೆ ಎಂದು ಗುರುತಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 75ವರ್ಷ ವಯಸ್ಸಾದವರು ಇತರರಿಗೆ ಅವಕಾಶ ಮಾಡಿಕೊಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಈ ವರ್ಷದ ಕೊನೆಯಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಅನುಮಾನ ಹುಟ್ಟಿಸಿದೆ. ಪ್ರಧಾನಿ ಮೋದಿ ಅವರ ವಯಸ್ಸಿನ ಮೇಲೆ ಕೇಂದ್ರೀಕರಿಸಬಾರದು. ಬದಲಿಗೆ ಅವರು ದೇಶಕ್ಕೆ ನೀಡಿದ ಕೊಡುಗೆಗಳ ಮೇಲೆ ಕೇಂದ್ರೀಕರಿಸಬೇಕು ಎಂದಿದ್ದಾರೆ.

ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ ಎಂದು ಹೇಳಿದ್ದಾರೆ.

ನಾವು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿಲ್ಲ. ನಮಗೆ ಪ್ರಧಾನಿ ವಯಸ್ಸಿನ ಬಗ್ಗೆ ಆಸಕ್ತಿ ಇಲ್ಲ, ದೇಶಕ್ಕೆ ಅವರು ನೀಡಿರುವ ಕೊಡುಗೆ ಮತ್ತು ಕೆಲಸದ ಬಗ್ಗೆ ಆಸಕ್ತಿಯಿದೆ. ಆದರೆ ಈ ಹಿಂದೆ ರಾಜಕಾರಣಿಗಳಿಗೆ 75 ವರ್ಷ ವಯೋಮಿತಿ ಎಂದು ಮೋದಿ ಅವರೇ ಹೇಳಿದ್ದರು. ಒಂದೆರಡು ತಿಂಗಳಲ್ಲಿ 75 ನೇ ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರೆಯೇ ಎಂಬುದು ಜನರಲ್ಲಿ ಅನುಮಾನಕ್ಕೆ ಕಾರಣವಾಗಿದೆ ಎಂದು ಪ್ರಿಯಾಂಕ್ ಖರ್ಗೆ ANI ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಈ ಮಧ್ಯೆ ಮಾತನಾಡಿದ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್,, ಬಹುಶಃ ಪ್ರಧಾನಿ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ಸುಳಿವನ್ನು ಮೋಹನ್ ಭಾಗವತ್ ನೀಡಿದ್ದಾರೆ. ಬಿಜೆಪಿ ಆರೆಸ್ಸೆಸ್‌ನ ರಾಜಕೀಯ ವಿಭಾಗವಾಗಿದೆ. ಆರ್‌ಎಸ್‌ಎಸ್ ತೆಗೆದುಕೊಳ್ಳುವ ನಿರ್ಧಾರಗಳನ್ನು ಅದು ಅನುಸರಿಸಬೇಕಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

SCROLL FOR NEXT