ಡಿಕೆ.ಶಿವಕುಮಾರ್  
ರಾಜಕೀಯ

ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದನ್ನು ಒಪ್ಪಲ್ಲ: ಡಿ.ಕೆ ಶಿವಕುಮಾರ್

ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ.

ಬೆಂಗಳೂರು: ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ. ಆದರೆ ಕೆಲವು ಟಿವಿ ಚಾನೆಲ್ ಮತ್ತಿತರ ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಗೆ ತೆರಳಿದ್ದೇನೆ ಎಂದು ವರದಿ ಆಗಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ವಿಚಾರ. ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸಲ್ಲದು ಎಂದು ಹೇಳಿದ್ದಾರೆ.

ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆ.ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿಯವರು ಭೇಟಿಗೆ ಸಮಯ ನೀಡಿರಲಿಲ್ಲ. ಭೇಟಿಗೆ ಕಾದು ಕುಳಿತು ಅವಕಾಶ ಸಿಗದೇ ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದರು. ಅದರೆ, ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

207 ಮೀಟರ್ ಎತ್ತರಕ್ಕೆ ಉಕ್ಕಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ ತೀರ್ಪು ಸೆ.9ಕ್ಕೆ ಕಾಯ್ದಿರಿಸಿದ ಕೋರ್ಟ್!

VIKRAM-32: ಭಾರತದ ಹೊಸ ಬಾಹ್ಯಾಕಾಶ ದರ್ಜೆಯ ಮೈಕ್ರೋಪ್ರೊಸೆಸರ್; Microchip ಮಹತ್ವ, ವಿಶೇಷತೆ ಏನು? ಇಲ್ಲಿದೆ ಮಾಹಿತಿ!

'DNA ಕಳ್ಳತನ' ಭೀತಿ.. ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ, ಕಾರಣ ಏನು? video

SCROLL FOR NEXT