ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ 
ರಾಜಕೀಯ

ಆಪರೇಷನ್‌ ಕಮಲಕ್ಕೆ ಯತ್ನ: 55 'ಕೈ' ನಾಯಕರ ಪಟ್ಟಿ ಇಟ್ಟುಕೊಂಡು, ದಾಳಿ ಬೆದರಿಕೆ ಹಾಕುತ್ತಿದ್ದಾರೆ; ಶಾಸಕ ಕಾಶಪ್ಪನವರ್ ಆರೋಪ

ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದ್ದು, 55 ಕಾಂಗ್ರೆಸ್ ಶಾಸಕರ ಪಟ್ಟಿ ಇಟ್ಟುಕೊಂಡು, ದಾಳಿ ನಡೆಸುವ ಬೆದರಿಗೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವಲ್ಲೇ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೊಸ ಬಾಂಬ್ ಸ್ಫೋಟಿಸಿದ್ದಾರೆ.

ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದ್ದು, 55 ಕಾಂಗ್ರೆಸ್ ಶಾಸಕರ ಪಟ್ಟಿ ಇಟ್ಟುಕೊಂಡು, ದಾಳಿ ನಡೆಸುವ ಬೆದರಿಗೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ಈ ಪಟ್ಟಿಯಲ್ಲಿ ನಾನೂ ಕೂಡ ಇರುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದು ಬಣದಿಂದ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ಕಾಶಪ್ಪನವರ್ ಅವರು ತಿರುಗೇಟು ನೀಡಿದರು.

ಬಿಜೆಪಿ ಹೈಕಮಾಂಡ್‌ ಹತ್ತಿರ ಕಾಂಗ್ರೆಸ್‌ನ 55 ಶಾಸಕರ ಟಾರ್ಗೆಟ್ ಲಿಸ್ಟ್ ಇದೆ. ಅದರಲ್ಲಿ ನಾನು ಇದ್ದರೂ ಇರಬಹುದು. ಕಾಂಗ್ರೆಸ್‌ನ 55 ಮಂದಿ ಶಾಸಕರ ಪಟ್ಟಿಯನ್ನು ಬಿಜೆಪಿಗರು ಮಾಡಿದ್ದಾರೆ. ಆ 55 ಶಾಸಕರಿಗೆ ಸಿಬಿಐ, ಇ.ಡಿ.(ಜಾರಿ ನಿರ್ದೇಶನಾಲಯ) ದಾಳಿ ನಡೆಸುವ ಬೆದರಿಕೆ ಹಾಕುತ್ತಿದ್ದಾರೆ. ಈಗಾಗಲೇ ಬಿಜೆಪಿಯವರು ಆ ಶಾಸಕರ ಮನೆಗಳಿಗೆ ತಮ್ಮ ಏಜೆಂಟರನ್ನು ಕಳಿಸಿ, ಬೆದರಿಕೆ ಹಾಕಿದ್ದಾರೆ.

ಬಿಜೆಪಿಗೆ ಬನ್ನಿ, ಬಾರದೆ ಹೋದರೆ ಸಿಬಿಐ, ಇಡಿ ದಾಳಿ ಮಾಡಿಸಿ, ನಿಮ್ಮ ಅಕ್ರಮ ಆಸ್ತಿ ಹೊರಗೆ ಎಳೆಸುತ್ತೇವೆ ಎನ್ನುತ್ತಿದ್ದಾರೆ. ಆ ಲಿಸ್ಟ್‌ನಲ್ಲಿ ನಾನು ಇದ್ದರೂ ಇರಬಹುದು. ಹೀಗಾಗಿ, ನಮ್ಮ ಶಾಸಕರಿಗೆ ಈ ಬಗ್ಗೆ ಭಯ ಇದೆ. ಆದರೆ, ಬಿಜೆಪಿಯವರ ಇಂತಹ ಬೆದರಿಕೆಗೆ ನಾನು ಹೆದರುವವನಲ್ಲ. ಅವರು ನನ್ನನ್ನು ಏನು ಮಾಡಲೂ ಸಾಧ್ಯವಿಲ್ಲ. ನನ್ನ ಮೇಲೆ ಇ.ಡಿ. ಸೇರಿ ಯಾವುದೇ ದಾಳಿ ಮಾಡಿದರೂ ನಾನು ಅದನ್ನು ಎದುರಿಸಲು ಸಜ್ಜಾಗಿದ್ದೇನೆ ಎಂದು ಹೇಳಿದರು.

ಮೊನ್ನೆಯಷ್ಟೇ, ನಮ್ಮ ಬಳ್ಳಾರಿ ಜಿಲ್ಲೆಯ ಶಾಸಕರಾದ ಭರತ್‌ ರೆಡ್ಡಿ, ತುಕಾರಾಮ್, ನಾಗೇಂದ್ರ ಅವರ ಮನೆಗಳ ಮೇಲೆ ದಾಳಿ ಮಾಡಿಸಿದರು. ಇವೆಲ್ಲ ಉದ್ದೇಶಪೂರ್ವಕ, ದ್ವೇಷದ, ಕುತಂತ್ರ ರಾಜಕಾರಣ. ಬಿಜೆಪಿಗೆ ನಿಜವಾಗಿಯೂ ಶಕ್ತಿ ಇದ್ದರೆ, 220 ಸ್ಥಾನಗಳನ್ನು ಗೆದ್ದು ಸ್ಪಷ್ಟ ಜನಾದೇಶದೊಂದಿಗೆ ಅಧಿಕಾರಕ್ಕೆ ಬರಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

SCROLL FOR NEXT