ಆರ್ ಅಶೋಕ್  
ರಾಜಕೀಯ

'ವಿರೋಧ ಪಕ್ಷದ ನಾಯಕನಾದ ನನಗೆ 2 ವರ್ಷಗಳಿಂದ ಸರ್ಕಾರ ಅಧಿಕೃತ ನಿವಾಸ ನೀಡಿಲ್ಲ, ನಮಗೆ ಪ್ರೋಟೋಕಾಲ್ ಪಾಠ ಮಾಡುತ್ತಾರೆ': ಆರ್ ಅಶೋಕ್

ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ, ಅಧಿಕೃತ ನಿವಾಸಕ್ಕಾಗಿ ರಾಜ್ಯ ಸರ್ಕಾರಕ್ಕೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಯಾವುದಕ್ಕೂ ನನಗೆ ಉತ್ತರ ಬಂದಿಲ್ಲ ಎಂದರು.

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಿಗಂದೂರು ಸೇತುವೆ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಚಿವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೇತುವೆ ನಿರ್ಮಾಣದ ಕೀರ್ತಿ ಬಿಜೆಪಿಗೆ ಸಲ್ಲುತ್ತಿದೆ ಎಂದು ಹತಾಶೆಗೊಂಡ ಮುಖ್ಯಮಂತ್ರಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ. ತಾವು ವಿರೋಧ ಪಕ್ಷದ ನಾಯಕನಾಗಿ ಎರಡು ವರ್ಷಗಳ ನಂತರವೂ ರಾಜ್ಯ ಸರ್ಕಾರ ತಮಗೆ ಅಧಿಕೃತ ಸರ್ಕಾರಿ ನಿವಾಸವನ್ನು ಇನ್ನೂ ನೀಡಿಲ್ಲ. ಕಾಂಗ್ರೆಸ್ ಪಕ್ಷ ಶಿಷ್ಟಾಚಾರವನ್ನು ಗೌರವಿಸುವ ರೀತಿ ಇದೇನಾ ಎಂದು ಅಶೋಕ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ, ಅಧಿಕೃತ ನಿವಾಸಕ್ಕಾಗಿ ರಾಜ್ಯ ಸರ್ಕಾರಕ್ಕೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಯಾವುದಕ್ಕೂ ನನಗೆ ಉತ್ತರ ಬಂದಿಲ್ಲ ಎಂದರು.

ಮುಖ್ಯಮಂತ್ರಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಶಿಷ್ಟಾಚಾರದ ಪ್ರಕಾರ ಅವರ ಹೆಸರನ್ನು ಸೇರಿಸಲಾಗಿದೆ. ಮುಖ್ಯಮಂತ್ರಿಯವರು ಬೇರೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಹೊಂದಿದ್ದರೆ, ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ಅವರೇ ನಿರ್ಧರಿಸಬೇಕು. ಕಾರ್ಯಕ್ರಮದ ದಿನಾಂಕ ಮತ್ತು ಸಮಯವನ್ನು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ನಿಗದಿಪಡಿಸಲಾಗುತ್ತದೆ ಎಂದು ನಿರೀಕ್ಷಿಸುವುದು ಅಸಮಂಜಸವಾಗಿದೆ ಎಂದರು,

ರಾಜ್ಯ ಸರ್ಕಾರವು ಎಂದಾದರೂ ವಿರೋಧ ಪಕ್ಷದ ನಾಯಕರು ಮತ್ತು ಶಾಸಕರ ಸಲಹೆ ಅಥವಾ ಅವರ ಕಾರ್ಯಕ್ರಮಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಂಡಿದ್ದಾರೆಯೇ ಎಂದು ಸಿಎಂ ಅವರನ್ನು ಪ್ರಶ್ನಿಸಿದರು. ಕಳೆದ ಎರಡು ವರ್ಷಗಳಲ್ಲಿ, ವಿರೋಧ ಪಕ್ಷದ ನಾಯಕನಾಗಿ, ನನ್ನನ್ನು ಯಾವುದೇ ಒಂದು ಕಾರ್ಯಕ್ರಮಕ್ಕೂ ಸರ್ಕಾರದ ಮಟ್ಟದಿಂದ ನನ್ನನ್ನು ಸಮಾಲೋಚಿಸಲೂ ಇಲ್ಲ, ಆಹ್ವಾನಿಸಲೂ ಇಲ್ಲ, ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮಗಳಿಗೂ ಸಹ ಎಂದು ಅಶೋಕ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

SCROLL FOR NEXT