ಆರ್ ಅಶೋಕ್  
ರಾಜಕೀಯ

'ವಿರೋಧ ಪಕ್ಷದ ನಾಯಕನಾದ ನನಗೆ 2 ವರ್ಷಗಳಿಂದ ಸರ್ಕಾರ ಅಧಿಕೃತ ನಿವಾಸ ನೀಡಿಲ್ಲ, ನಮಗೆ ಪ್ರೋಟೋಕಾಲ್ ಪಾಠ ಮಾಡುತ್ತಾರೆ': ಆರ್ ಅಶೋಕ್

ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ, ಅಧಿಕೃತ ನಿವಾಸಕ್ಕಾಗಿ ರಾಜ್ಯ ಸರ್ಕಾರಕ್ಕೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಯಾವುದಕ್ಕೂ ನನಗೆ ಉತ್ತರ ಬಂದಿಲ್ಲ ಎಂದರು.

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಿಗಂದೂರು ಸೇತುವೆ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಚಿವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೇತುವೆ ನಿರ್ಮಾಣದ ಕೀರ್ತಿ ಬಿಜೆಪಿಗೆ ಸಲ್ಲುತ್ತಿದೆ ಎಂದು ಹತಾಶೆಗೊಂಡ ಮುಖ್ಯಮಂತ್ರಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ. ತಾವು ವಿರೋಧ ಪಕ್ಷದ ನಾಯಕನಾಗಿ ಎರಡು ವರ್ಷಗಳ ನಂತರವೂ ರಾಜ್ಯ ಸರ್ಕಾರ ತಮಗೆ ಅಧಿಕೃತ ಸರ್ಕಾರಿ ನಿವಾಸವನ್ನು ಇನ್ನೂ ನೀಡಿಲ್ಲ. ಕಾಂಗ್ರೆಸ್ ಪಕ್ಷ ಶಿಷ್ಟಾಚಾರವನ್ನು ಗೌರವಿಸುವ ರೀತಿ ಇದೇನಾ ಎಂದು ಅಶೋಕ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ, ಅಧಿಕೃತ ನಿವಾಸಕ್ಕಾಗಿ ರಾಜ್ಯ ಸರ್ಕಾರಕ್ಕೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಯಾವುದಕ್ಕೂ ನನಗೆ ಉತ್ತರ ಬಂದಿಲ್ಲ ಎಂದರು.

ಮುಖ್ಯಮಂತ್ರಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಶಿಷ್ಟಾಚಾರದ ಪ್ರಕಾರ ಅವರ ಹೆಸರನ್ನು ಸೇರಿಸಲಾಗಿದೆ. ಮುಖ್ಯಮಂತ್ರಿಯವರು ಬೇರೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಹೊಂದಿದ್ದರೆ, ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ಅವರೇ ನಿರ್ಧರಿಸಬೇಕು. ಕಾರ್ಯಕ್ರಮದ ದಿನಾಂಕ ಮತ್ತು ಸಮಯವನ್ನು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ನಿಗದಿಪಡಿಸಲಾಗುತ್ತದೆ ಎಂದು ನಿರೀಕ್ಷಿಸುವುದು ಅಸಮಂಜಸವಾಗಿದೆ ಎಂದರು,

ರಾಜ್ಯ ಸರ್ಕಾರವು ಎಂದಾದರೂ ವಿರೋಧ ಪಕ್ಷದ ನಾಯಕರು ಮತ್ತು ಶಾಸಕರ ಸಲಹೆ ಅಥವಾ ಅವರ ಕಾರ್ಯಕ್ರಮಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಂಡಿದ್ದಾರೆಯೇ ಎಂದು ಸಿಎಂ ಅವರನ್ನು ಪ್ರಶ್ನಿಸಿದರು. ಕಳೆದ ಎರಡು ವರ್ಷಗಳಲ್ಲಿ, ವಿರೋಧ ಪಕ್ಷದ ನಾಯಕನಾಗಿ, ನನ್ನನ್ನು ಯಾವುದೇ ಒಂದು ಕಾರ್ಯಕ್ರಮಕ್ಕೂ ಸರ್ಕಾರದ ಮಟ್ಟದಿಂದ ನನ್ನನ್ನು ಸಮಾಲೋಚಿಸಲೂ ಇಲ್ಲ, ಆಹ್ವಾನಿಸಲೂ ಇಲ್ಲ, ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮಗಳಿಗೂ ಸಹ ಎಂದು ಅಶೋಕ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!