ಬಿ.ವೈ. ವಿಜಯೇಂದ್ರ ಸಾಂದರ್ಭಿಕ ಚಿತ್ರ 
ರಾಜಕೀಯ

ಈ ವರ್ಷಾಂತ್ಯಕ್ಕೆ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಬಿ.ವೈ ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ರಾಹುಲ್ ಗಾಂಧಿ ಸಮಯ ಕೂಡ ಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ಗೆ ಸವಾಲು ಹಾಕಲು ಸಾಧನಾ ಸಮಾವೇಶ ಮಾಡ್ತಿದ್ದಾರೆ.

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಊಹಪೋಹಾಗಳು ನಡೆಯುತ್ತಿರುವಂತೆಯೇ ಈ ವರ್ಷದ ಕೊನೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಜುಲೈ 19 ರಂದು ಮೈಸೂರಿನಲ್ಲಿ ಸರ್ಕಾರದ 'ಸಾಧನ ಸಮಾವೇಶ' ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಮಂತ್ರಿ ಸ್ಥಾನದ ಕುರ್ಚಿ ಅಲುಗಾಡುವ ಸಂದರ್ಭ ಎದುರಾದಾಗಲೆಲ್ಲಾ ಅವರು ಸಮಾವೇಶ ನಡೆಸುತ್ತಾರೆ. ಅಹಿಂದ ವೋಟ್ ಬ್ಯಾಂಕ್ ಬಳಸಿಕೊಂಡು, ಸಿಎಂ ಸ್ಥಾನದಿಂದ ತನ್ನನ್ನು ಬದಲಾಯಿಸದಂತೆ ಪಕ್ಷದ ಹೈಕಮಾಂಡ್ ಬೆದರಿಸುವ ತಂತ್ರ ಮಾಡುತ್ತಾರೆ ಎಂದರು.

ನೋಡ್ತಾ ಇರಿ, ನವೆಂಬರ್ ಅಥವಾ ಬಿಹಾರ ಚುನಾವಣೆಗೂ ಮೊದಲು ಅಥವಾ ನಂತರ ರಾಜ್ಯದಲ್ಲಿ ಮಹತ್ವದ ರಾಜಕೀಯ ಬದಲಾವಣೆಯಾಗಲಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ರಾಹುಲ್ ಗಾಂಧಿ ಸಮಯ ಕೂಡ ಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ಗೆ ಸವಾಲು ಹಾಕಲು ಸಾಧನಾ ಸಮಾವೇಶ ಮಾಡ್ತಿದ್ದಾರೆ. ಇದು ಸಾಧನಾ ಸಮಾವೇಶ ಅಲ್ಲ. ಕಾಂಗ್ರೆಸ್ ಹೈಕಮಾಂಡ್ ಗೆ ಮಾಡುತ್ತಿರುವ ಬ್ಲ್ಯಾಕ್ ಮೇಲ್ ಸಮಾವೇಶ. ರಾಜ್ಯಕ್ಕಾಗಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಸಮಾವೇಶ ಮಾಡುತ್ತಿದ್ದಾರೆ? ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಮಯ ಬಂದಿದೆ. ಹೀಗಾಗಿ ಹೈಕಮಾಂಡ್ ಬೆದರಿಸಲು ಸಿಎಂ ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೊಣೆಗಾರರು, ಆದರೆ ಅಮಾಯಕ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಿದ ಕುನ್ಹಾ ಆಯೋಗ ಈ ತಪ್ಪು ಮುಚ್ಚಿಕೊಳ್ಳಲು ಆರ್ ಸಿ ಬಿ ತಂಡವನ್ನು ಬಲಿ ಪಶು ಮಾಡಿದ್ದಾರೆ. ಈ ವರದಿ ಸಮರ್ಪಕ ಮತ್ತು ನ್ಯಾಯಯುತವಾಗಿಲ್ಲ. ಸಿಎಂ ಗೆ ಪ್ರಾಮಾಣಿಕತೆ ಇದ್ದಿದ್ದರೇ ಇಂತಹ ವರದಿಯನ್ನು ನ್ಯಾಯಾಲಯದ ಮುಂದೆ ಇಡುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT