ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಗ್ಯಾರಂಟಿ ಯೋಜನೆಗಳ ಕುರಿತು ದ್ವಿಮುಖ ಧೋರಣೆ: BJP ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬಿಹಾರದ ಚುನಾವಣೆಯಲ್ಲಿ ಎನ್‌.ಡಿ‌.ಎ ಮೈತ್ರಿಕೂಟ 'ಕರ್ನಾಟಕ ಮಾದರಿ'ಯ ಗ್ಯಾರಂಟಿಗಳ ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಕಾರ್ಯಕ್ರಮಗಳನ್ನು 'ಬಿಟ್ಟಿ ಭಾಗ್ಯಗಳು.

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ, ಇತರೆ ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಬಿಹಾರದ ಚುನಾವಣೆಯಲ್ಲಿ ಎನ್‌.ಡಿ‌.ಎ ಮೈತ್ರಿಕೂಟ 'ಕರ್ನಾಟಕ ಮಾದರಿ'ಯ ಗ್ಯಾರಂಟಿಗಳ ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಕಾರ್ಯಕ್ರಮಗಳನ್ನು 'ಬಿಟ್ಟಿ ಭಾಗ್ಯಗಳು, ರಾಜ್ಯವನ್ನು ದಿವಾಳಿ ಮಾಡುವ ಯೋಜನೆಗಳು, ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಅಭಿವೃದ್ಧಿಯೇ ನಿಂತು ಹೋಗಿದೆ' ಎಂದು ನಿರಂತರವಾಗಿ ಟೀಕೆ ಮಾಡುತ್ತಿರುವ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಕೊನೆಗೂ ಕರ್ನಾಟಕ ಮಾದರಿಯನ್ನು ಅನುಸರಿಸುವ ಅನಿವಾರ್ಯತೆ ಬಂದಿದೆ. ಗ್ಯಾರಂಟಿ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಜನಪರ ಕಾರ್ಯಕ್ರಮಗಳು ಗೆದ್ದಿವೆ, ವಿಪಕ್ಷಗಳ ಟೀಕೆಗಳು ಸತ್ತಿವೆ ಎಂದು ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂಬಿ.ಪಾಟೀಲ್ ಅವರು, ಕರ್ನಾಟಕದಲ್ಲಿ ನಮ್ಮ ಖಾತರಿ ಯೋಜನೆಗಳನ್ನು ಅಪಹಾಸ್ಯ ಮಾಡುವ ಬಿಜೆಪಿ, ಈಗ ಬಿಹಾರದಲ್ಲಿ ತಿಂಗಳಿಗೆ 125 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದೆ. ಮತದಾರರನ್ನು ಓಲೈಸುವ ಪ್ರಯತ್ನದಲ್ಲಿ ಪಕ್ಷದ ದ್ವಂದ್ವತೆಯನ್ನು ಇದು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ" ಎಂದು ಟೀಕಿಸಿದರು.

ಬಿಜೆಪಿ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಟೀಕಿಸಿತ್ತು, ಆದರೆ, ಮಹಾರಾಷ್ಟ್ರದಲ್ಲಿ ಇದೇ ರೀತಿಯ ಕಾರ್ಯಕ್ರಮವನ್ನು ಜಾರಿಗೆ ತಂದರು. ದೆಹಲಿಯಲ್ಲಿಯೂ ಅದೇ ಮಾದರಿಯನ್ನು ಪುನರಾವರ್ತಿಸಿದ್ದಾರೆಂದು ವ್ಯಂಗ್ಯವಾಡಿದರು.

ಯೋಜನೆಗಳನ್ನು ಆರ್ಥಿಕ ಹೊರೆ ಎನ್ನುತ್ತಿರುವ ಬಿಜೆಪಿ, ಇತರೆ ರಾಜ್ಯಗಳಲ್ಲಿ ಇದೇ ಯೋಜನೆಗಳನ್ನು ಜಾರಿಗೆ ತಂದು ನ್ಯಾಯಯುತ ಎನ್ನುತ್ತಿದೆ. ಈ ರೀತಿಯ ದ್ವಿಮುಖ ಧೋರಣೆ ನ್ಯಾಯಸಮ್ಮತವಲ್ಲ ಎಂದರು.

ಡಿಕೆ.ಶಿವಕುಮಾರ್ ಅವರು ಮಾತನಾಡಿ, ಬಡವರ ಬದುಕಿಗಾಗಿ ನಾವು ಗೃಹಲಕ್ಷ್ಮಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ಬಳಿಕ ಬಿಜೆಪಿಯವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ರಾಜ್ಯಗಳಲ್ಲಿ ಘೋಷಣೆ ಮಾಡಿದ್ದರು, ಈಗ ಬಿಹಾರದಲ್ಲಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಸದಾ ದೇಶಕ್ಕೆ ಮಾದರಿ. ಕಾಂಗ್ರೆಸ್ ಮಾದರಿಯನ್ನು ಇಡೀ ದೇಶವೇ ಅನುಸರಿಸುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!