ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

ಹುಕ್ಕೇರಿ ಕ್ಷೇತ್ರಕ್ಕೆ ಹೊರಗಿನವರು ಬರುವ ತಾಕತ್ತಿಲ್ಲ; ಸಮಯ ಬಂದಾಗ ಸೂಕ್ತ ಉತ್ತರ ಕೊಡುವೆ: ರಮೇಶ್ ಕತ್ತಿಗೆ ಜಾರಕಿಹೊಳಿ ತಿರುಗೇಟು

ಈ ಸಭೆಗಳು ಕಳೆದ 20 ವರ್ಷಗಳಿಂದ ನಮ್ಮ ವಿರುದ್ಧ ನಡೆಯುತ್ತಿವೆ. ಅವರು ತಮ್ಮ ಶಕ್ತಿಯನ್ನು ಪ್ರದರ್ಶಿಸಲಿ, ನಾವು ನಮ್ಮ ಏಕತೆಯನ್ನು ಪ್ರದರ್ಶಿಸುತ್ತೇವೆ. ರಾಜಕೀಯದಲ್ಲಿ ಇದು ಸಾಮಾನ್ಯ.

ಬೆಳಗಾವಿ: ಹುಕ್ಕೇರಿ ಕ್ಷೇತ್ರಕ್ಕೆ ಹೊರಗಿನವರು ಬರುವ ತಾಕತ್ತಿಲ್ಲ ಎಂಬ ಮಾಜಿ ಸಂಸದ ರಮೇಶ್ ಕತ್ತಿಯವರ ಹೇಳಿಕೆಗೆ ಸರಿಯಾದ ಸಮಯದಲ್ಲಿ ಸೂಕ್ತ ಉತ್ತರ ನೀಡುವೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಸೋಮವಾರ ತಿರುಗೇಟು ನೀಡಿದ್ದಾರೆ.

ನಿಡಸೋಸಿಯ ದುರದುಂಡೇಶ್ವರ ಮಠದಲ್ಲಿ ಪೀಠಾಧಿಪತಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿಯವರೊಂದಿಗೆ ನಡೆದ ಸಭೆಯ ನಂತರ ಜಾರಕಿಹೊಳಿಯವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ರಮೇಶ್ ಕತ್ತಿಯವರ ಹೇಳಿಕೆಗೆ ಸರಿಯಾದ ಸಮಯದಲ್ಲಿ ಪ್ರತಿಕ್ರಿಯಿಸುತ್ತೇನೆಂದು ಹೇಳಿದರು.

ಹುಕ್ಕೇರಿ ವಿದ್ಯುತ್ ಸಹಕಾರ ಸಂಘಕ್ಕೆ ಚುನಾವಣೆ ನಡೆಸುವ ಬಗ್ಗೆ ತಕ್ಷಣದ ಯೋಜನೆ ಇಲ್ಲ. ನಾವು ನಾಯಕರೊಂದಿಗೆ ಚರ್ಚೆ ನಡೆಸಿ ಜನರಿಗೆ ಏನು ಪ್ರಯೋಜನವಾಗುತ್ತದೆಯೋ ಆ ನಿರ್ಧಾರವನ್ನು ಕೈಗೊಳ್ಳುತ್ತೇವೆಂದು ತಿಳಿಸಿದರು.

ಸತೀಶ್ ಜಾರಕಿಹೊಳಿಯವರು ಸೊಸೈಟಿಯಲ್ಲಿನ ನೌಕರರನ್ನು ಖಾಯಂಗೊಳಿಸಲು ನೇಮಕಾತಿ ಆದೇಶಗಳನ್ನು ನೀಡಿದ್ದಾರೆ ಎಂದು ಸೊಸೈಟಿಯ ಮಾಜಿ ಅಧ್ಯಕ್ಷ ಕಲಗೌಡ ಪಾಟೀಲ್ ಮಾಡಿರುವ ಆರೋಪ ಕುರಿತು ಪ್ರತಿಕ್ರಿಯಿಸಿ, ನಾವು ನೇಮಕಾತಿ ಪತ್ರಗಳನ್ನು ವಿತರಿಸುವ ಅಗತ್ಯವಿಲ್ಲ. ಹಾಗೆ ಮಾಡುವ ಅಭ್ಯಾಸವೂ ನಮಗಿಲ್ಲ ಎಂದರು.

ಇದೇ ವೇಳೆ ಹುಕ್ಕೇರಿ ಕ್ಷೇತ್ರದಲ್ಲಿ ರ್ಯಾಲಿಗಳನ್ನು ನಡೆಸುವ ಕುರಿತ ಊಹಾಪೋಹಗಳನ್ನು ಜಾರಕಿಹೊಳಿಯವರು ತಳ್ಳಿಹಾಕಿದರು.

ರ್ಯಾಲಿಗಳಿಂದ ಯಾವುದೇ ಭರವಸೆ ಇಲ್ಲ. ನಾವು ಈಗಾಗಲೇ ಆ ಕ್ಷೇತ್ರದಲ್ಲಿ 5 ಲಕ್ಷಕ್ಕೂ ಹೆಚ್ಚು ಜನರ ಒಗ್ಗೂಡಿಸಿದ್ದೇವೆ. ನಿನ್ನೆ ನಡೆದ ರ್ಯಾಲಿಯಲ್ಲಿ 2,000 ಜನರು ಭಾಗವಹಿಸಿದ್ದರು. ಜನರನ್ನು ಸಜ್ಜುಗೊಳಿಸುವುದು ನಮಗೆ ಹೊಸದೇನಲ್ಲ. ನಾನು ಕತ್ತಿ ಅವರಂತೆ ಆತುರದಲ್ಲಿಲ್ಲ. ನಾನು ಆಯುರ್ವೇದ ವೈದ್ಯನಂತೆ. ನಮ್ಮ ಶೈಲಿ ನಿಧಾನ ಮತ್ತು ಸೂಕ್ಷ್ಮವಾಗಿದೆ ಎಂದು ಟೀಕಿಸಿದರು.

ಜಾರಕಿಹೊಳಿ ಕುಟುಂಬವನ್ನು ಗುರಿಯಾಗಿಸಿಕೊಂಡು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಮಠದಲ್ಲಿ ನಡೆದ ಲಿಂಗಾಯತ ನಾಯಕರ ಸಭೆ ಕುರಿತು ಪ್ರತಿಕ್ರಿಯಿಸಿ, ಈ ಸಭೆಗಳು ಕಳೆದ 20 ವರ್ಷಗಳಿಂದ ನಮ್ಮ ವಿರುದ್ಧ ನಡೆಯುತ್ತಿವೆ. ಅವರು ತಮ್ಮ ಶಕ್ತಿಯನ್ನು ಪ್ರದರ್ಶಿಸಲಿ, ನಾವು ನಮ್ಮ ಏಕತೆಯನ್ನು ಪ್ರದರ್ಶಿಸುತ್ತೇವೆ. ರಾಜಕೀಯದಲ್ಲಿ ಇದು ಸಾಮಾನ್ಯ. ಕನೇರಿ ಮಠದಲ್ಲಿ ನಡೆದ ಸಭೆಯ ಬಗ್ಗೆ ನನಗೆ ತಿಳಿದಿದೆ, ಆದರೆ, ಅದರಿಂದ ಯಾವುದೇ ಪರಿಣಾಮ ಬೀರಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT