ಬಸವರಾಜ ಬೊಮ್ಮಾಯಿ 
ರಾಜಕೀಯ

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ SIT ತನಿಖೆ ನಡೆಯಲಿ; ಸಂಸದ ಬೊಮ್ಮಾಯಿ

ದೂರುದಾರರ ಮೇಲೆ ಒತ್ತಡ ಹೇರಿದವರು ಯಾರು ಎಂದು ಎಸ್‌ಐಟಿ ತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿಗೆ ಅಲ್ಲಿನ ದೇವಾಲಯದ ಮಹತ್ವದ ಬಗ್ಗೆ ತಿಳಿದಿದೆ. ತನಿಖೆ ನಿಷ್ಪಕ್ಷಪಾತವಾಗಿರಬೇಕು.

ಬೆಂಗಳೂರು: ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಯಾರನ್ನೂ ಗುರಿಯಾಗಿಸದೆ ಕಾಲಮಿತಿಯೊಳಗೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸೋಮವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದೂರುದಾರರ ಮೇಲೆ ಒತ್ತಡ ಹೇರಿದವರು ಯಾರು ಎಂದು ಎಸ್‌ಐಟಿ ತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿಗೆ ಅಲ್ಲಿನ ದೇವಾಲಯದ ಮಹತ್ವದ ಬಗ್ಗೆ ತಿಳಿದಿದೆ. ತನಿಖೆ ನಿಷ್ಪಕ್ಷಪಾತವಾಗಿರಬೇಕು ಎಂದು ಹೇಳಿದರು.

ಕಾಂಗ್ರೆಸ್‌ನೊಳಗಿನ ಬೆಳವಣಿಗೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪ್ರಮುಖ ರಾಜಕೀಯ ಬದಲಾವಣೆ ಸನ್ನಿಹಿತವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ ನೀಡಿದ್ದಕ್ಕಾಗಿ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯನ್ನು ಸಂಸದರು ಟೀಕಿಸಿದರು.

ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡುವುದರಿಂದ ಅವರ ವ್ಯವಹಾರಗಳ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಹೇಳಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಮಾತನಾಡಿ, ಎಸ್‌ಐಟಿ ರಚಿಸಿದ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.

ದೇವಾಲಯದ ಬಗ್ಗೆ ಸುಳ್ಳು ಮಾಹಿತಿ ಹರಡುವುದು ತಪ್ಪು. ತನಿಖೆ ಯಾರನ್ನೂ ತಪ್ಪಾಗಿ ಸಿಲುಕಿಸುವ ಗುರಿಯನ್ನು ಹೊಂದಿರಬಾರದು. ಇಷ್ಟೊಂದು ಶವಗಳು ಕಂಡುಬಂದಿದ್ದರೆ ಸಂತ್ರಸ್ತರ ಕುಟುಂಬಗಳು ದೂರು ನೀಡುತ್ತಿದ್ದರು. ಅಂತಹ ಎಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.

ಧಾರ್ಮಿಕ ಸ್ಥಳದ ಖ್ಯಾತಿಗೆ ಧಕ್ಕೆ ತರುವ ರೀತಿಯಲ್ಲಿ ವಿವಾದ ಸೃಷ್ಟಿಸುವುದು ಸ್ವೀಕಾರಾರ್ಹವಲ್ಲ. ಪ್ರಸ್ತುತ ಕೇಳಿ ಬಂದಿರುವ ಅಪರಾಧಗಳಿಗೂ ಧರ್ಮಸ್ಥಳ ದೇವಸ್ಥಾನ ಆಡಳಿತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT