ವಿ.ಸೋಮಣ್ಣ 
ರಾಜಕೀಯ

ರೆಡ್ಡಿ-ರಾಮುಲು ವೈಮನಸ್ಸು ಶಮನಕ್ಕಾಗಿ ಅಡಿಪಾಯ ಹಾಕಿದ್ದೇ ನಾನು; ಇಬ್ಬರು ನನಗೆ ಒಳ್ಳೆಯ ಗಿಫ್ಟ್ ಕೊಟ್ರು: ಸೋಮಣ್ಣ ಅಸಮಾಧಾನ

ರೆಡ್ಡಿ ಮತ್ತು ಶ್ರೀರಾಮುಲು ಇತ್ತೀಚಿಗಿನ ಬಿಜೆಪಿ ಕಾರ್ಯಕ್ರಮದಲ್ಲಿ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ ನನಗೆ ಇಬ್ಬರೂ ಒಳ್ಳೆಯ ಗಿಫ್ಟ್‌ ನೀಡಿದ್ದಾರೆ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆ: ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಇಬ್ಬರೂ ಒಂದಾಗಲಿ ಎಂದು ಬಯಸಿ ಅದಕ್ಕೆ ಅಡಿಪಾಯ ಹಾಕಿದ್ದೇ ನಾನು, ಇದೀಗ ಇಬ್ಬರೂ ಸೇರಿಕೊಂಡು, ನನಗೆ ಒಳ್ಳೆಯ ಗಿಫ್ಟ್‌ ಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ರೆಡ್ಡಿ ಮತ್ತು ಶ್ರೀರಾಮುಲು ಇತ್ತೀಚಿಗಿನ ಬಿಜೆಪಿ ಕಾರ್ಯಕ್ರಮದಲ್ಲಿ ಆಡಿದ ಮಾತುಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ ನನಗೆ ಇಬ್ಬರೂ ಒಳ್ಳೆಯ ಗಿಫ್ಟ್‌ ನೀಡಿದ್ದಾರೆ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನಮ್ಮಲ್ಲಿ ಯಾವುದೇ ಟೀಂ ಅಂತಾ ಇಲ್ಲ. ನಮ್ಮದು ಒಂದೇ ಹೈಕಮಾಂಡ್‌, ಒಬ್ಬರೇ ನಾಯಕರು. ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಹರಿಹರ ಶಾಸಕ ಬಿ.ಪಿ.ಹರೀಶ್‌ ಅವರ ಅಭಿಪ್ರಾಯ. ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ. ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪಕ್ಷಕ್ಕೆ ವಾಪಸ್‌ ಬರುವ ವಿಚಾರವೂ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಹಲವು ತಿಂಗಳಿಂದ ಮುನಿಸಿಕೊಂಡಿದ್ದ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವೇದಿಕೆಯಲ್ಲಿ ಅಕ್ಕ-ಪಕ್ಕ ಕುಳಿತು, ಪರಸ್ಪರ ಕೈ ಕುಲುಕಿ ಒಗ್ಗಟ್ಟು ಪ್ರದರ್ಶಿಸಿದ್ದು, ಅಚ್ಚರಿಗೆ ಕಾರಣವಾಯಿತು. ತಾಲೂಕಿನ ಮರಳಿ ಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಳ್ಳಾರಿ ವಿಭಾಗ ಮಟ್ಟದ ಬಿಜೆಪಿ ಸಂಘಟನಾ ಸಭೆ ನಡೆಯಿತು. ಸಭೆ ಆರಂಭಕ್ಕೂ ಪೂರ್ವದಲ್ಲಿ ವೇದಿಕೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇಬ್ಬರು ನಾಯಕರ ಕೈಗಳನ್ನು ಮೇಲಕ್ಕೆ ಎತ್ತಿ ಒಗ್ಗಟ್ಟು ಪ್ರದರ್ಶಿಸಿದ್ದಲ್ಲದೇ, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಇಬ್ಬರು ಒಂದೇ ಎಂದು ಸಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!