ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

29 ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಫೈನಲ್; ಸೋಮವಾರ ಸಿಎಂ ಅಂಕಿತ ಸಾಧ್ಯತೆ; MLC ನಾಮ ನಿರ್ದೇಶನಕ್ಕೂ ಶೀಘ್ರದಲ್ಲೇ ತೆರೆ!

ಶಿವಕುಮಾರ್ ಮತ್ತು ನಾನು ನಮ್ಮ ಸಲಹೆಗಳನ್ನು ನೀಡಿದ್ದೇವೆ ಮತ್ತು ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಸಂಜೆ 29 ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿದ್ದು ಒಂದು ಅಥವಾ ಎರಡು ದಿನಗಳಲ್ಲಿ ಹೆಸರುಗಳನ್ನು ಘೋಷಿಸುವ ಸಾಧ್ಯತೆಯಿದೆ.

ಶಿವಕುಮಾರ್ ಮತ್ತು ನಾನು ನಮ್ಮ ಸಲಹೆಗಳನ್ನು ನೀಡಿದ್ದೇವೆ ಮತ್ತು ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು. ಆಗಸ್ಟ್ 11 ರ ವಿಧಾನಸಭೆಯ ಜಂಟಿ ಅಧಿವೇಶನಕ್ಕೆ ಮುಂಚಿತವಾಗಿ ನಾಲ್ಕು ಎಂಎಲ್‌ಸಿಗಳ ನಾಮನಿರ್ದೇಶನ ಮಾಡಲಾಗುತ್ತದೆಯೇ ಎಂದು ಕೇಳಿದಾಗ, ಅವರು "ಬಹುಶಃ ಆಗಬಹುದು ಎಂದು ತಿಳಿಸಿದರು.

ಕರ್ನಾಟಕ ಭವನದಲ್ಲಿ ಅಧಿಕಾರಿಗಳ ನಡುವಿನ ಜಗಳಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಈ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದರು. ನಿಗಮ ಮಂಡಳಿಯಲ್ಲಿ ಈ ಬಾರಿ ಕಾರ್ಯಕರ್ತರಿಗೆ ಮಣೆ ಹಾಕಬೇಕು ಎಂಬ ಬೇಡಿಕೆ ಇದೆ. ಪಕ್ಷದ ಪರವಾಗಿ ಸಾಕಷ್ಟು ಜನರು ಕೆಲಸ ಮಾಡುತ್ತಿದ್ದಾರೆ. ಪಕ್ಷದ ಪರವಾಗಿ ಧ್ವನಿ ಎತ್ತುತ್ತಿರುತ್ತಾರೆ. ಆದರೆ, ಅಧಿಕಾರ, ಸ್ಥಾನಮಾನ ವಿಚಾರ ಬಂದಾಗ ಕಾಂಗ್ರೆಸ್ ನಲ್ಲಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಇದೆ.

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪತ್ರಕರ್ತರನ್ನು ನಾಮಕರಣಗೊಳಿಸುವುದಕ್ಕೆ ಹೈಕಮಾಂಡ್‌ ವಲಯದಲ್ಲಿ ವಿರೋಧ ವ್ಯಕ್ತವಾಗಿರುವುದರಿಂದ ಈಗಾಗಲೇ ಹೈಕಮಾಂಡ್‌ ಅನುಮೋದಿಸಿರುವ ಪಟ್ಟಿ ಪರಿಷ್ಕರಣೆಗೊಳ್ಳುವ ಸಾಧ್ಯತೆಗಳಿವೆ.ಆದರೆ ಮುಖ್ಯಮಂತ್ರಿಗಳು ಹಿಂದಿನ ಪಟ್ಟಿಗೆ ಅಂತಿಮ ಮುದ್ರೆ ಪಡೆಯಲು ಸಾಕಷ್ಟು ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರತಿ ಕೃಷ್ಣ, ರಮೇಶ್‌ ಬಾಬು, ಡಿ.ಜಿ.ಸಾಗರ್‌ ಹಾಗೂ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಅವರ ನೇಮಕಕ್ಕೆ ಹೈಕಮಾಂಡ್‌ ಈ ಹಿಂದೆ ಒಪ್ಪಿಗೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT