ಡಾ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ  
ರಾಜಕೀಯ

ನಾಲ್ವಡಿ ಒಡೆಯರಿಗಿಂತಲೂ ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ

ಸಾಕಷ್ಟು ಅಭಿವೃದ್ಧಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅಭಿವೃದ್ಧಿ ಮಾಡಿರುವುದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದ್ದು‌. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತಿವೆ

ಮೈಸೂರು: ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅಥವಾ ಮಹಾರಾಜರಷ್ಟೇ ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಸಾಕಷ್ಟು ಅಭಿವೃದ್ಧಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅಭಿವೃದ್ಧಿ ಮಾಡಿರುವುದಕ್ಕಾಗಿಯೇ ಸಾಧನಾ ಸಮಾವೇಶ ಮಾಡಿದ್ದು‌. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತಿವೆ ಯಾರು ಹೇಳಿದ್ದು ಐದು ವರ್ಷ ಸಿದ್ದರಾಮಯ್ಯ ಸಿಎಂ ಅಲ್ಲ ಅಂತ.

ಬೇಸಿಕಲಿ, 5 ವರ್ಷ ಸಿದ್ದರಾಮಯ್ಯ ಸಿಎಂ ಹೌದೋ, ಅಲ್ಲವೋ ಎಂಬ ಚರ್ಚೆಯೇ ಸರಿ ಇಲ್ಲ. ಸಿದ್ದರಾಮಯ್ಯ ಎರಡೂವರೆ ವರ್ಷ ಮಾತ್ರ ಸಿಎಂ ಅಂತ ನಮ್ಮ ಪಕ್ಷದವರು ಯಾರಾದ್ರು ಹೇಳಿದ್ದಾರಾ?. ಇದು ವಿಪಕ್ಷಗಳು ಸೃಷ್ಟಿ ಮಾಡಿದ ಚರ್ಚೆ ಎಂದರು.

ಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗುತ್ತೆ ಅಂಥ ರಾಜಣ್ಣ ಹೇಳಿದ್ದಾರೆ. ಕ್ರಾಂತಿ ಅಂದ್ರೆ ಅದು ಸಿಎಂ ಬದಲಾವಣೆ ಅಂತ ಅರ್ಥನಾ?. ಯಾಕೆ ಕ್ರಾಂತಿಯನ್ನು ಸಿಎಂ ಬದಲಾವಣೆಗೆ ತಂದು ನಿಲ್ಲಿಸುತ್ತೀರಾ?. ಬೇರೆ ವಿಚಾರಕ್ಕೆ ಕ್ರಾಂತಿಯಾಗಬಹುದು. ಅದು ಏನು ಕ್ರಾಂತಿ ಅಂಥ ರಾಜಣ್ಣ ಅವರನ್ನೇ ಕೇಳಿ. ಕ್ರಾಂತಿ ಅಂದರೆ ಸಿಎಂ ಬದಲಾವಣೆ ಎನ್ನುವ ಅರ್ಥವನ್ನು ಮೊದಲು ಬಿಡಿ. ಹೈಕಮಾಂಡ್, ಕಾಂಗ್ರೆಸ್ ಶಾಸಕರು ಎಲ್ಲರೂ ಸಿದ್ದು ಪರವಾಗಿದ್ದಾರೆ. ಅಂದ ಮೇಲೆ ಅವರೇಕೆ ಬದಲಾಗುತ್ತಾರೆ ಎಂದರು.

ಮುಡಾ ವಿಚಾರವಾಗಿ ಮಾತನಾಡಿ, ಮುಡಾ ಕೇಸ್‌ ಸಂಬಂಧ ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಸಿದ್ದುಗೆ ರಾಜಕೀಯವಾಗಿ ಮತ್ತಷ್ಟು ಶಕ್ತಿ ಹೆಚ್ಚಾಗಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಈಗ ಅದು ನಿವಾರಣೆಯಾಗಿದೆ. ಸಹಜವಾಗಿ ರಾಜಕೀಯವಾಗಿ ಅವರ ಶಕ್ತಿ ಮತ್ತಷ್ಟು ಹೆಚ್ಚಾಗಿದೆ. ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಮಾಸ್ ಲೀಡರ್.

ಹೀಗಾಗಿ, ಸಿದ್ದರಾಮಯ್ಯ ಅವರನ್ನು ನೈತಿಕವಾಗಿ ಕುಗ್ಗಿಸಿದರೆ ಪಕ್ಷಕ್ಕೆ ಹಿನ್ನಡೆಯಾಗುತ್ತೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಟಾರ್ಗೆಟ್ ಆಗಿದ್ದಾರೆ. ಆದರೆ, ಎಲ್ಲವನೂ ಮೀರಿ ಈಗ ನಿಲ್ಲುತ್ತಿದ್ದೇವೆ ಎಂದು ಹೇಳಿದರು. ಮುಡಾ ವಿಚಾರದಲ್ಲಿ ವಿನಾಕಾರಣ ನಮ್ಮ ತಾಯಿಯ ವಿಚಾರವನ್ನು ರಾಜಕೀಯವಾಗಿ ಎಳೆದು ತರಲಾಯಿತು. ಕೊನೆಗೂ ನಮಗೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕಿದೆ. ಈ ತೀರ್ಪಿನಿಂದ ನಮ್ಮ ತಾಯಿಗೆ ಸಮಾಧಾನ ಸಿಕ್ಕಿದೆ. ಸದ್ಯಕ್ಕೆ ನಾವು 14 ಸೈಟ್ ಗಳನ್ನು ವಾಪಸ್ ಕೇಳುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT